Advertisement

ಇಂದು ಡಾ.ರಾಜ್‌ 91ನೇ ಹುಟ್ಟುಹಬ್ಬ

09:36 AM Apr 24, 2019 | Lakshmi GovindaRaju |

ಬೆಂಗಳೂರು: ಇಂದು ವರನಟ ಡಾ.ರಾಜ್‌ಕುಮಾರ್‌ ಅವರ 91ನೇ ಜನ್ಮದಿನ. ತಮ್ಮ ವಿಶಿಷ್ಟ ಅಭಿನಯದ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ ರಾಜ್‌ ಹುಟ್ಟುಹಬ್ಬವನ್ನು ಇಂದು ರಾಜ್ಯಾದ್ಯಂತ ಅಭಿಮಾನಿಗಳು ಆಚರಿಸಲಿದ್ದಾರೆ.

Advertisement

ಡಾ.ರಾಜ್‌ ಕುಟುಂಬ ಇಂದು ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ತೆರಳಿ, ಪೂಜೆ ಸಲ್ಲಿಸಲಿದೆ. ಸಹಸ್ರಾರು ಸಂಖ್ಯೆಯಲ್ಲಿ ಸೇರಲಿರುವ ಅಭಿಮಾನಿಗಳು ಕೂಡಾ ತಮ್ಮ ನೆಚ್ಚಿನ ನಟನ ಸ್ಮರಣೆ ಮಾಡಲಿದ್ದಾರೆ. ಡಾ.ರಾಜ್‌ ಹುಟ್ಟುಹಬ್ಬದಂದು ಅನ್ನದಾನ, ರಕ್ತದಾನ ಶಿಬಿರ ಸೇರಿ ಹಲವು ಕಾರ್ಯಕ್ರಮಗಳು ನಡೆಯಲಿವೆ.

ವಾರ್ತಾ ಇಲಾಖೆ ವತಿಯಿಂದಲೂ ಡಾ.ರಾಜ್‌ಕುಮಾರ್‌ ಅವರ 91ನೇ ಜನ್ಮದಿನಾಚರಣೆ ನಡೆಯಲಿದೆ. ಇಂದು ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಹಿರಿಯ ಸಾಹಿತಿ ನಾಡೋಜ ಪ್ರೊ.ಕೆ.ಎಸ್‌.ನಿಸಾರ್‌ ಅಹಮದ್‌ ಸೇರಿ ಅನೇಕರು ಭಾಗವಹಿಸಲಿದ್ದಾರೆ. ಮೋಹನ್‌ ಹಾಗೂ ತಂಡದವರಿಂದ ರಾಜ್‌ ಚಿತ್ರಗಳ ಗೀತಗಾಯನ ನಡೆಯಲಿದೆ.

ಸರ್ಕಾರದ ವತಿಯಿಂದ ರಾಜ್‌ ಹುಟ್ಟುಹಬ್ಬ: ಸರ್ಕಾರದ ವತಿಯಿಂದ ರಾಜ್ಯದೆಲ್ಲೆಡೆ ಡಾ.ರಾಜ್‌ಕುಮಾರ್‌ ಹುಟ್ಟುಹಬ್ಬವನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಈ ಕುರಿತು ಮಂಗಳವಾರ ಟ್ವೀಟ್‌ ಮಾಡಿರುವ ಅವರು, “ಡಾ. ರಾಜ್‌ ಕುಮಾರ್‌ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ. ತೆರೆಯ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲಿಯೂ ಅವರ ಔದಾರ್ಯ, ಅಂತಃಕರಣ, ಜೀವನ ಮೌಲ್ಯಗಳು ಅನುಕರಣೀಯ. ನಾಳೆ ಅವರ ಹುಟ್ಟುಹಬ್ಬ. ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆ ರಾಜಣ್ಣ ಅವರ ಹುಟ್ಟುಹಬ್ಬ ಆಚರಿಸುತ್ತಿದೆ. ಎಲ್ಲರೂ ಭಾಗವಹಿಸಿ. ಡಾ.ರಾಜ್‌ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಟ್ವೀಟ್‌ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next