Advertisement

Innanje: ಅತಿಥಿ ಉಪನ್ಯಾಸಕ ಆತ್ಮಹತ್ಯೆ

10:53 PM Feb 16, 2024 | Team Udayavani |

ಕಾಪು: ಬೆಳಪು ಸರಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಅತಿಥಿ ಉಪನ್ಯಾಸಕರೊಬ್ಬರು ದೇವಸ್ಥಾನದ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಪಡುಬಿದ್ರಿ ನಿವಾಸಿ ವಿನಯ್‌ ರಾವ್‌ (27) ಮೃತರು.

Advertisement

ವಿನಯ್‌ ರಾವ್‌ ಗುರುವಾರ ಮನೆಯಿಂದ ಕಾಲೇಜಿಗೆ ತೆರಳಿದ್ದರು. ಸಂಜೆ ಇನ್ನಂಜೆ ದೇಗುಲದ ಪಕ್ಕ ಸುತ್ತಾಡಿಕೊಂಡಿದ್ದ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಶುಕ್ರವಾರ ಮುಂಜಾನೆ ಕೆರೆಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು ಕೆರೆಯ ದಡದಲ್ಲಿ ಲ್ಯಾಪ್‌ಟಾಪ್‌ ಸಹಿತ ಕೆಲವು ಸೊತ್ತುಗಳು ಪತ್ತೆಯಾಗಿವೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿನಯ್‌ ಅವಿವಾಹಿತರಾಗಿದ್ದು ತಂದೆ, ತಾಯಿ, ಸಹೋದರಿ ಹಾಗೂ ಸಹೋ ದರನನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next