Advertisement

ಇಂದು ವೀರಶೈವ ಲಿಂಗಾಯತ ನಾಯಕರ ಸಭೆ

06:15 AM Sep 13, 2017 | Team Udayavani |

ಬೆಂಗಳೂರು: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಗೊಂದಲ ನಿವಾರಿಸಲು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್‌ ನೇತೃತ್ವದಲ್ಲಿ ಬುಧವಾರ ವೀರಶೈವ ಲಿಂಗಾಯತ ನಾಯಕರ ಸಭೆ ನಡೆಯಲಿದೆ. ಡಾ.ಶರಣ ಪ್ರಕಾಶ್‌ ಪಾಟೀಲ್‌ ಮನೆಯಲ್ಲಿ ವೀರಶೈವ ಮಹಾಸಭ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ರಾಜ್ಯಾಧ್ಯಕ್ಷ ಎನ್‌. ತಿಪ್ಪಣ್ಣ ಸೇರಿದಂತೆ ಮಹಾಸಭೆಯ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಮುಂಚೂಣಿಯಲ್ಲಿರುವ ಸಚಿವರಾದ ಎಂ.ಬಿ. ಪಾಟೀಲ್‌, ಬಸವರಾಜ ರಾಯರೆಡ್ಡಿ, ವಿನಯ ಕುಲಕರ್ಣಿ, ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಎಸ್‌.ಎಂ. ಜಾಮದಾರ್‌ ಅವರಿಗೂ ಸಭೆಗೆ ಆಹ್ವಾನ ನೀಡಲಾಗಿದೆ. ವೀರಶೈವ ಮತ್ತು ಲಿಂಗಾಯತವನ್ನು ಪ್ರತ್ಯೇಕ ಮಾಡುವುದರಿಂದ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಗೊಂದಲ ನಿವಾರಣೆ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ಮಧ್ಯೆ, ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ವೀರಶೈವ ಲಿಂಗಾಯತ ಇಬ್ಭಾಗ‌ ಮಾಡುವುದು ಬೇಡ ಎಂದು ಹೇಳಿರುವುದರಿಂದ, ವೀರಶೈವ ಮಹಾಸಭೆಯ ಮಾತಿಗೆ ಹೆಚ್ಚಿನ ಬೆಲೆ ಬಂದಂತಾಗಿದ್ದು, ಸಭೆಯಲ್ಲಿ ಅದೂ ಕೂಡ ಚರ್ಚೆಗೆ ಬರುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next