Advertisement

ಇಂದು ಯೋಗ ದಿನಾಚರಣೆ

02:37 PM Jun 21, 2021 | Team Udayavani |

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯಿಂದ ಮಹಿಳಾ ವಿಭಾಗದ ಸಹಯೋಗದೊಂದಿಗೆ ಯೋಗ ದಿನಾಚರಣೆ ಅಂಗವಾಗಿ ಜೂ. 21ರಂದು ಸಂಜೆ 5ಕ್ಕೆ ಯೋಗ ತರಬೇತಿಯನ್ನು ಆಯೋಜಿಸಲಾಗಿದೆ.

Advertisement

ಹೆಚ್ಚಿನ ಮಾಹಿತಿಗಾಗಿ ಜಠಿಠಿಟs://cಜಚಠಿ.ಡಿಜಚಠಿsಚಟಟ.cಟಞ/ಎಜಘಠಿfಈV4lಏಞ8Nಔಠಿಓ8RಟಿRಈಟಿ ವಾಟ್ಸ್‌ಆ್ಯಪ್‌ ಗ್ರೂಪ್‌ ಅನ್ನು ಸೇರಲು ವಿನಂತಿಸಲಾಗಿದೆ.ವೆಬಿನಾರ್‌ ಮೂಲಕ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಆರ್ಟ್‌ ಆಫ್‌ ಲಿವಿಂಗ್‌ ಬಗ್ಗೆ ಅರುಣ್‌ ಶೆಣೈ ಮಾತನಾಡಲಿದ್ದಾರೆ.

ರವಿಶಂಕರ್‌ ಗುರೂಜಿಯವರ ಆಶೀರ್ವಾದದಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ವಸಾಯಿ-ಡಹಾಣೂ ಪ್ರಾದೇಶಿಕ ಸಮಿಯ ಪರವಾಗಿ ಕಾರ್ಯಾಧ್ಯಕ್ಷ ಹರೀಶ್‌ ಪಾಂಡು ಶೆಟ್ಟಿ, ಸಂಘದ ಪ್ರಾದೇಶಿಕ ಸಮಿತಿಗಳ ಪಶ್ಚಿಮ ವಲಯದ ಸಮನ್ವಯಕರಾದ ಶಶಿಧರ ಕೆ. ಶೆಟ್ಟಿ ಇನ್ನಂಜೆ, ಸಮಿತಿಯ ಸಂಚಾಲಕ ಜಯಂತ ಆರ್‌. ಪಕ್ಕಳ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಷಾ ಎಸ್‌. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಪ್ರಖ್ಯಾತ್‌ ಶೆಟ್ಟಿ ಹಾಗೂ ಸಮಿತಿಯ ಮತ್ತು ಎಲ್ಲ ಉಪಸಮಿತಿಗಳ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next