Advertisement

Today ಪ್ರಧಾನಿ ಮೋದಿ ಭೇಟಿ ಆಗಲಿರುವ ಸಿಎಂ ಸಿದ್ದರಾಮಯ್ಯ

12:25 AM Dec 19, 2023 | Team Udayavani |

ಬೆಂಗಳೂರು: ಪ್ರಧಾನಿ ಮೋದಿ ಅವರ ಭೇಟಿಗಾಗಿ ದಿಲ್ಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊನೆಗೂ ಪ್ರಧಾನಿ ಕಾಲಾವಕಾಶ ನೀಡಿದ್ದಾರೆ.

Advertisement

ರಾಜ್ಯದಲ್ಲಿ ಸರಕಾರ ರಚಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಒಮ್ಮೆ ಮಾತ್ರ ಪ್ರಧಾನಿ ಅವರನ್ನು ಭೇಟಿಯಾಗಿದ್ದರು. ಆಗಸ್ಟ್‌ ತಿಂಗಳಿನಲ್ಲಿ ಸಂಸತ್‌ ಭವನದಲ್ಲಿ ಮುಂಗಾರು ಅಧಿವೇಶನದ ಸಂದರ್ಭ ಈ ಭೇಟಿ ನಡೆದಿತ್ತು.

ಅದಾದ ಬಳಿಕ ಕಾವೇರಿ ಜಲವಿವಾದ, ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಕುರಿತು ಸರ್ವಪಕ್ಷ ನಿಯೋಗ ಭೇಟಿಗೆ ಕೇಳಿದರೂ ಪ್ರಧಾನಿ ಅವಕಾಶ ನೀಡು ತ್ತಿಲ್ಲ ಎಂದು ಸಿಎಂ ಆರೋಪಿಸಿದ್ದರು.
ಈಗ ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕನ್ನು ಬರಪೀಡಿತ ಎಂದು ಘೋಷಿಸಿರುವ ಸರಕಾರ, 30-35 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದ್ದು, ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಕನಿಷ್ಠ 18 ಸಾವಿರ ಕೋಟಿ ರೂ.ಗಳ ಪರಿಹಾರಕ್ಕಾಗಿ ಕೇಂದ್ರ ಸರಕಾರದ ಮುಂದೆ ಬೇಡಿಕೆ ಇಟ್ಟಿದೆ. ಈಗ ಕೊನೆಗೂ ಭೇಟಿಗೆ ಅವಕಾಶ ಸಿಕ್ಕಿದೆ.

ಸಿದ್ದರಾಮಯ್ಯ ಅವರೊಂದಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ, ಅಧಿಕಾರಿಗಳು ಇರಲಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next