Advertisement

Kukke Subrahmanya ಕ್ಷೇತ್ರಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

05:59 PM Jan 17, 2024 | Team Udayavani |

ಸುಬ್ರಹ್ಮಣ್ಯ: ಕ್ರಿಕೆಟಿಗ ಮಂಗಳೂರು ಮೂಲದ ಕೆ.ಎಲ್.ರಾಹುಲ್ ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.

Advertisement

ಕ್ಷೇತ್ರಕ್ಕೆ ಭೇಟಿ ನೀಡಿದ ಕೆ.ಎಲ್.ರಾಹುಲ್ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ದೇವಳದ ವತಿಯಿಂದ ಕೆ.ಎಲ್.ರಾಹುಲ್ ಅವರನ್ನು ಗೌರವಿಸಲಾಯಿತು. ಸ್ನೇಹಿತರ ಜೊತೆಗೆ ಕೆ.ಎಲ್.ರಾಹುಲ್ ಕುಕ್ಕೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿಗಳು, ಸಿಬ್ಬಂದಿಗಳು, ದೇವಳದವರು, ಸ್ನೇಹಿತರು ಜತೆಗಿದ್ದರು. ಅಭಿಮಾನಿಗಳು ರಾಹುಲ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು.

ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೂ ಕೆ.ಎಲ್‌.ರಾಹುಲ್‌ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next