Advertisement

ಇಂದು ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ

11:23 AM Aug 19, 2018 | Team Udayavani |

ಮೈಸೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭಾನುವಾರ ಮೈಸೂರು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

Advertisement

ಬೆಳಗ್ಗೆ 11ಗಂಟೆಗೆ ಮೈಸೂರು ವಿಮಾನ ನಿಲ್ದಾಣದಿಂದ ಸೇನಾ ಹೆಲಿಕಾಪ್ಟರ್‌ ಮೂಲಕ ಮಧ್ಯಾಹ್ನ 12ಗಂಟೆವರೆಗೆ ವೈಮಾನಿಕ ಸಮೀಕ್ಷೆ ನಡೆಸಲಿದ್ದು, ಬಳಿಕ ಮಧ್ಯಾಹ್ನ 12.30ಕ್ಕೆ ಅದೇ ಹೆಲಿಕಾಪ್ಟರ್‌ನಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಮಧ್ಯಾಹ್ನ 2ಗಂಟೆಗೆ ಚಿಕ್ಕಮಗಳೂರು ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದು, ಮಧ್ಯಾಹ್ನ 3.30ಕ್ಕೆ ಚಿಕ್ಕಮಗಳೂರಿನಿಂದ ಹೊರಟು ಶಿವಮೊಗ್ಗ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ಸಂಜೆ 6ಗಂಟೆಗೆ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಬಸವೇಶ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next