Advertisement

ಇಂದು “ಕಮಲ’ತೆಕ್ಕೆಗೆ ಜಯಪ್ರಕಾಶ್‌ ಹೆಗ್ಡೆ

07:40 AM Mar 08, 2017 | |

ಬೆಂಗಳೂರು: ಮಾಜಿ ಸಂಸದ ಉಡುಪಿ ಜಿಲ್ಲೆಯ ಕೆ.ಜಯಪ್ರಕಾಶ್‌ ಹೆಗ್ಡೆ ಕಾಂಗ್ರೆಸ್‌ ತೊರೆದು ಬುಧವಾರ ಬಿಜೆಪಿ ಸೇರಲಿದ್ದಾರೆ.

Advertisement

ಇವರೊಂದಿಗೆ ಈಗಾಗಲೇ ಕಾಂಗ್ರೆಸ್‌ ತೊರೆದಿರುವ ಬಳ್ಳಾರಿ ಜಿಲ್ಲೆ ಹೊಸಪೇಟೆ ಕ್ಷೇತ್ರದ ಮಾಜಿ ಶಾಸಕ ರತನ್‌ ಸಿಂಗ್‌ ಕೂಡ ಬಿಜೆಪಿ ಸೇರಲಿದ್ದು, ಬೆಳಗ್ಗೆ 11ಕ್ಕೆ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಇಬ್ಬರನ್ನೂ ಪಕ್ಷಕ್ಕೆ
ಬರಮಾಡಿಕೊಳ್ಳಲಿದ್ದಾರೆ. ಬ್ರಹ್ಮಾವರ ಕ್ಷೇತ್ರ ದಿಂದ ಶಾಸಕರಾದ ಜಯಪ್ರಕಾಶ್‌ ಹೆಗ್ಡೆ ನಂತರ ಸಚಿವರಾಗಿಯೂ ಕೆಲಸ ಮಾಡಿ 
ದ್ದರು. ಜನತಾ ಪರಿವಾರದ ಒಳಜಗಳದ ಹಿನ್ನೆಲೆಯಲ್ಲಿ ಪಕ್ಷದಿಂದ ಹೊರಬಂದು ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದರು.

ಬಳಿಕ ಕಾಂಗ್ರೆಸ್‌ ಸೇರಿದ್ದ ಅವರು, ಸಂಸದರಾಗಿದ್ದ ಡಿ.ವಿ.ಸದಾನಂದಗೌಡ ಮುಖ್ಯಮಂತ್ರಿ ಯಾದ ಬಳಿಕ ನಡೆದ ಉಪ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸತ್‌ ಪ್ರವೇಶಿಸಿದ್ದರು. 2014ರ ಲೋಕಸಭೆ 
ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ  ಸೋಲು ಅನುಭವಿಸಿದ್ದರು. ಆರಂಭದಿಂದಲೂ ಬಿಜೆಪಿ ವಿರುದ್ಧವೇ ರಾಜಕಾರಣ ಮಾಡಿಕೊಂಡು ಬಂದಿದ್ದ ಜಯಪ್ರಕಾಶ್‌ ಹೆಗ್ಡೆ ಇದೀಗ ಬಿಜೆಪಿ ಸೇರುತ್ತಿದ್ದಾರೆ. ಇವರ ಜತೆಗೆ ಹೊಸಪೇಟೆಯ ಮಾಜಿ ಶಾಸಕ ರತನ್‌ ಸಿಂಗ್‌ ಕೂಡ ಬಿಜೆಪಿ ಸೇರುತ್ತಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next