Advertisement

ಇಂದು ಮಹಾಶಿವರಾತ್ರಿ: ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ

01:00 AM Mar 04, 2019 | Team Udayavani |

ಮಂಗಳೂರು/ಉಡುಪಿ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಸೋಮವಾರ ಉಭಯ ಜಿಲ್ಲೆಗಳ ಬಹುತೇಕ ಶಿವ ದೇವಸ್ಥಾನಗಳಲ್ಲಿ ಜಾತ್ರೆ, ರುದ್ರಾಭಿಷೇಕ ಹಾಗೂ ವಿಶೇಷ ಪೂಜೆಗಳು ಭಕ್ತಿ ಸಂಭ್ರಮದಿಂದ ನಡೆಯಲಿವೆ.
ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ ಹಾಗೂ ಶಿವರಾತ್ರಿ ಮಹೋತ್ಸವ ನಡೆಯಲಿದ್ದು, ಸೋಮವಾರ ಬೆಳಗ್ಗಿನಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. 

Advertisement

ಕದ್ರಿ ಮಂಜುನಾಥ ದೇಗುಲದಲ್ಲಿ ಶಿವರಾತ್ರಿ ಅಂಗವಾಗಿ ವಿಶೇಷವಾಗಿ ರುದ್ರಾಭಿಷೇಕ, ಶಿವಪೂಜೆ, ರಾತ್ರಿ ಜಮಾ ಪೂಜೆ, ಉತ್ಸವ ಬಲಿ, ಬೆಳ್ಳಿ ರಥೋತ್ಸವ ಜರಗಲಿದೆ. ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ಸೋಮವಾರ ಬೆಳಗ್ಗೆಯಿಂದ ಮರುದಿನ ಬೆಳಗ್ಗೆವರೆಗೆ ವಿಶೇಷ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಶರವು ಮಹಾಗಣಪತಿ ದೇಗುಲದಲ್ಲಿ ಬೆಳಗ್ಗೆ 6ರಿಂದ ಉಷಃಕಾಲ ಪೂಜೆ, ಏಕಾದಶ ರುದ್ರಾಭಿಷೇಕ, ವಿಶೇಷ ಸೀಯಾಳಾಭಿಷೇಕ ನಡೆಯಲಿದೆ. ಸಂಜೆ 7.30ರಿಂದ ವಿಶೇಷ ಅಲಂಕಾರ ಪೂಜೆ, ಮಹಾಪೂಜೆ, ಕಾರ್ತಿಕ ಪೂಜೆ, 8ಕ್ಕೆ ಶತರುದ್ರಾಭಿಷೇಕ, ರಂಗಪೂಜೆ, ಮಹಾಪೂಜೆ ಜರಗಲಿದೆ. ಧರ್ಮಸ್ಥಳವೂ ಶಿವರಾತ್ರಿ ಆಚರಣೆಗೆ ಸಜ್ಜಾಗಿದೆ.

ಉಡುಪಿ ಶ್ರೀ ಅನಂತೇಶ್ವರ ದೇವಸ್ಥಾನ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನ, ಕೋಟೇಶ್ವರದ ಶ್ರೀಶಂಕರ ನಾರಾಯಣ ದೇವಸ್ಥಾನ, ಶಂಕರನಾರಾಯಣದ ದೇವ
ಸ್ಥಾನ, ಮಡಿ ಮಲ್ಲಿಕಾರ್ಜುನ ದೇವಸ್ಥಾನ ಮೊದಲಾದೆಡೆಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಪಾರಾಯಣಗಳು ನಡೆಯಲಿವೆ. 

ಶಿವರಾತ್ರಿಯ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿಯ ವಿವಿಧ ಮಾರುಕಟ್ಟೆಗಳಲ್ಲಿ ವ್ಯಾಪಾರ ವಹಿವಾಟು ಭರ್ಜರಿಯಾಗಿ ನಡೆಯುತ್ತಿದ್ದು, ರವಿವಾರ ಹೂ-ಹಣ್ಣುಗಳ ಮಾರಾಟ ಜೋರಾಗಿತ್ತು. ಭಾರೀ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಗಳಿಗೆ ಕೊಂಡೊಯ್ಯಲು ಹೂ-ಹಣ್ಣು ಖರೀದಿಯಲ್ಲಿ ತೊಡಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next