ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ ಹಾಗೂ ಶಿವರಾತ್ರಿ ಮಹೋತ್ಸವ ನಡೆಯಲಿದ್ದು, ಸೋಮವಾರ ಬೆಳಗ್ಗಿನಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
Advertisement
ಕದ್ರಿ ಮಂಜುನಾಥ ದೇಗುಲದಲ್ಲಿ ಶಿವರಾತ್ರಿ ಅಂಗವಾಗಿ ವಿಶೇಷವಾಗಿ ರುದ್ರಾಭಿಷೇಕ, ಶಿವಪೂಜೆ, ರಾತ್ರಿ ಜಮಾ ಪೂಜೆ, ಉತ್ಸವ ಬಲಿ, ಬೆಳ್ಳಿ ರಥೋತ್ಸವ ಜರಗಲಿದೆ. ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ಸೋಮವಾರ ಬೆಳಗ್ಗೆಯಿಂದ ಮರುದಿನ ಬೆಳಗ್ಗೆವರೆಗೆ ವಿಶೇಷ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಶರವು ಮಹಾಗಣಪತಿ ದೇಗುಲದಲ್ಲಿ ಬೆಳಗ್ಗೆ 6ರಿಂದ ಉಷಃಕಾಲ ಪೂಜೆ, ಏಕಾದಶ ರುದ್ರಾಭಿಷೇಕ, ವಿಶೇಷ ಸೀಯಾಳಾಭಿಷೇಕ ನಡೆಯಲಿದೆ. ಸಂಜೆ 7.30ರಿಂದ ವಿಶೇಷ ಅಲಂಕಾರ ಪೂಜೆ, ಮಹಾಪೂಜೆ, ಕಾರ್ತಿಕ ಪೂಜೆ, 8ಕ್ಕೆ ಶತರುದ್ರಾಭಿಷೇಕ, ರಂಗಪೂಜೆ, ಮಹಾಪೂಜೆ ಜರಗಲಿದೆ. ಧರ್ಮಸ್ಥಳವೂ ಶಿವರಾತ್ರಿ ಆಚರಣೆಗೆ ಸಜ್ಜಾಗಿದೆ.
ಸ್ಥಾನ, ಮಡಿ ಮಲ್ಲಿಕಾರ್ಜುನ ದೇವಸ್ಥಾನ ಮೊದಲಾದೆಡೆಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಪಾರಾಯಣಗಳು ನಡೆಯಲಿವೆ. ಶಿವರಾತ್ರಿಯ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿಯ ವಿವಿಧ ಮಾರುಕಟ್ಟೆಗಳಲ್ಲಿ ವ್ಯಾಪಾರ ವಹಿವಾಟು ಭರ್ಜರಿಯಾಗಿ ನಡೆಯುತ್ತಿದ್ದು, ರವಿವಾರ ಹೂ-ಹಣ್ಣುಗಳ ಮಾರಾಟ ಜೋರಾಗಿತ್ತು. ಭಾರೀ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಗಳಿಗೆ ಕೊಂಡೊಯ್ಯಲು ಹೂ-ಹಣ್ಣು ಖರೀದಿಯಲ್ಲಿ ತೊಡಗಿದ್ದರು.