Advertisement

ಇಂದು ಶೃಂಗೇರಿಗೆ ಸಿಎಂ, ನಿಖಿಲ್‌ ಭೇಟಿ 

12:30 AM Mar 18, 2019 | |

 ಶೃಂಗೇರಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿ ಅವರು ಮಾ.18ರಂದು ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖೀಲ್‌ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಹಿನ್ನೆಲೆ ಯಲ್ಲಿ ಬೆಳಗ್ಗೆ 10.30ಕ್ಕೆ ಹೆಲಿಕಾಪ್ಟರ್‌ ಮೂಲಕ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ.

Advertisement

ಶಾರದಾಂಬೆಯ ಸನ್ನಿಧಿಯಲ್ಲಿ ಪಕ್ಷದ ಬಿ.ಫಾರಂ ಇಟ್ಟು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ, ಗುರುನಿವಾಸದಲ್ಲಿ ಜಗದ್ಗುರುಗಳ ಆಶೀರ್ವಾದ ಪಡೆಯಲಿದ್ದಾರೆ. ಕಳೆದ ಎರಡು ದಿನದ ಹಿಂದೆ ಲೋಕೋಪಯೋಗಿ ಸಚಿವ ರೇವಣ್ಣ ದಂಪತಿ, ಪುತ್ರ ಪ್ರಜ್ವಲ್‌ ರೇವಣ್ಣರೊಂದಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದರು. ದೇವೇಗೌಡ ಕುಟುಂಬ ಹತ್ತು ದಿನದ ಹಿಂದೆ ಪೀಠದಲ್ಲಿ ಚಂಡಿಕಾಯಾಗ ನೆರವೇರಿಸಿತ್ತು. 2018ರ ವಿಧಾನಸಭಾ ಚುನಾವಣೆ ಯಲ್ಲಿಯೂ ಜಾತ್ಯತೀತ ಜನತಾದಳ ಅಭ್ಯರ್ಥಿಗಳು ಬಿ ಫಾರಂಗೆ ಪೀಠದಲ್ಲಿ ಪೂಜೆ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next