Advertisement

ಇಂದು “ಪರೀಕ್ಷಾ ಪೇ ಚರ್ಚಾ”-ಪ್ರಧಾನಿ ಮೋದಿ ಜತೆ ಸಂವಾದದಲ್ಲಿ ರಾಜ್ಯದ ಇಬ್ಬರು ವಿದ್ಯಾರ್ಥಿಗಳು

11:06 PM Jan 28, 2024 | Team Udayavani |

ಬೆಂಗಳೂರು: ಪ್ರಧಾನಿ ಮೋದಿ ಅವರ ಜತೆಗಿನ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ “ಪರೀಕ್ಷಾ ಪೇ ಚರ್ಚಾ’ದಲ್ಲಿ ರಾಜ್ಯದ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

Advertisement

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಬಾಲಕರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಯೋಗೇಂದ್ರ ಪ್ರಸಾದ್‌ ಹಾಗೂ ಮೈಸೂರು ಜಿಲ್ಲೆ ಎಚ್‌ಡಿ ಕೋಟೆಯ ಸೈಂಟ್‌ ಮೇರೀಸ್‌ ಕಾನ್ವೆಂಟ್‌ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಹರ್ಷಿಕಾ ಸಿ. ಆಯ್ಕೆಯಾಗಿದ್ದಾರೆ. ಅವರು ದಿಲ್ಲಿಯ ಭಾರತ್‌ “ಮಂಟಪಂ’ನಲ್ಲಿ ಸೋಮವಾರ 11 ಗಂಟೆಗೆ ಆರಂಭಗೊಳ್ಳಲಿರುವ ಕಾರ್ಯಕ್ರಮದಲ್ಲಿ ಖುದ್ದು ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿಗಳನ್ನು ಭೇಟಿಯಾಗಿ ಸಂವಾದದಲ್ಲಿ ಪಾಲ್ಗೊಳ್ಳಲು ದಿಲ್ಲಿಗೆ ತೆರಳಿರುವ ಹರ್ಷಿಕಾ ಅವರು “ಉದಯವಾಣಿ’ ಜತೆಗೆ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಪ್ರಧಾನಿಗಳನ್ನು ಭೇಟಿ ಆಗುತ್ತಿರುವುದು ಖುಷಿಯ ವಿಚಾರ. ಅವರನ್ನು ಭೇಟಿಯಾಗಿ ಪ್ರಶ್ನೆ ಕೇಳಲು ತುದಿಗಾಲಲ್ಲಿ ನಿಂತಿದ್ದೇನೆ ಎಂದು ಹೇಳಿದ್ದಾರೆ. ಯೋಗೇಂದ್ರ ಪ್ರಸಾದ್‌ ಕೂಡ ಖುಷಿಯಾಗಿದ್ದು, ಸಿಕ್ಕ ಅವಕಾಶವನ್ನು ಬಳಸಿಕೊಂಡು ಪ್ರಧಾನಿಗಳ ಜತೆಗೆ ಸಂವಾದದಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ. ಗುಂಡ್ಲುಪೇಟೆಯ ಹಂಗಳ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಉಪ ಪ್ರಾಂಶುಪಾಲ ಚಂದ್ರಶೇಖರ್‌ ಎಸ್‌. ಅವರು ಮಾರ್ಗದರ್ಶಕ ಶಿಕ್ಷಕರಾಗಿ ವಿದ್ಯಾರ್ಥಿಗಳ ಜತೆಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next