Advertisement

ಇಂದು ಗಣರಾಜ್ಯೋತ್ಸವ: ದಕ್ಷಿಣ ಕನ್ನಡದಲ್ಲಿ  ಕ‌ಟ್ಟೆಚ್ಚರ 

01:10 AM Jan 26, 2019 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಹಿಂದೂ ನಾಯಕರ ಹತ್ಯೆ ಯತ್ನದ ಬೆದರಿಕೆ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ಸಂದರ್ಭ ಜಿಲ್ಲೆಯಲ್ಲಿ ಹಿಂದಿಗಿಂತ ಹೆಚ್ಚಿನ ಭದ್ರತೆ ಮತ್ತು ಕಟ್ಟೆಚ್ಚರ ವಹಿಸಲಾಗಿದೆ.

Advertisement

“ಹೆಚ್ಚುವರಿ ಪೊಲೀಸ್‌ ನಿಯೋಜನೆ ಮಾಡಿಲ್ಲ. ಕಮಿಷನರೆಟ್‌ ವ್ಯಾಪ್ತಿಯಲ್ಲಿ ಇರುವ ಪೊಲೀಸರಷ್ಟೇ ಬಂದೋಬಸ್ತು ಕಾರ್ಯಕ್ಕೆ ನಿಯೋಜನೆಗೊಂಡಿದ್ದಾರೆ. ಆದರೆ ಎಲ್ಲೆಡೆ ಕಟ್ಟೆಚ್ಚರದಿಂದ ಇರುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ’ ಎಂದು ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌ ಉದಯವಾಣಿಗೆ ತಿಳಿಸಿದ್ದಾರೆ. ಬೆದರಿಕೆ ಇರುವ ಹಿಂದೂ ನಾಯಕರಾದ ಡಾ| ಕಲ್ಲಡ್ಕ ಪ್ರಭಾಕರ ಭಟ್‌, ಶರಣ್‌ ಪಂಪ್‌ವೆಲ್‌ ಮತ್ತು ಜಗದೀಶ್‌ ಶೇಣವ ಅವರಿಗೆ ಹೆಚ್ಚುವರಿ ಭದ್ರತೆಯನ್ನು ಕಲ್ಪಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next