Advertisement

ಇಂದು ಸಿಎಂ, ಪರಂ ದೆಹಲಿಗೆ

06:50 AM Apr 12, 2018 | |

ಬೆಂಗಳೂರು:ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಅಂತಿಮ ಪಟ್ಟಿ ಸಿದ್ದಪಡಿಸಲು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಾರ್ಚ್‌ 13 ರಂದು ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಗುರುವಾರ ದೆಹಲಿಗೆ ತೆರಳಲಿದ್ದಾರೆ.

Advertisement

ಮಧ್ಯಾಹ್ನ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳುವ ಇಬ್ಬರು ನಾಯಕರು, ಸಂಜೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ರಾತ್ರಿ ಅನೌಪಚಾರಿಕ ಚರ್ಚೆ ನಡೆಸಲಿದ್ದಾರೆ.

ಶುಕ್ರವಾರ ಕೇಂದ್ರದ ಮಾಜಿ ಸಚಿವ ಆಸ್ಕರ್‌ ಫ‌ನಾಂಡೀಸ್‌ ಅಧ್ಯಕ್ಷತೆಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ರಾಹುಲ್‌ ಗಾಂಧಿ ಸಮ್ಮುಖದಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಮೊದಲ ಹಂತದಲ್ಲಿ ಹಾಲಿ ಶಾಸಕರು ಸೇರಿದಂತೆ 135 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಏಪ್ರಿಲ್‌ 13 ರಾತ್ರಿ ಅಥವಾ ಏಪ್ರಿಲ್‌ 14 ರಂದು ಪ್ರಕಟಿಸುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next