Advertisement

ಇಂದು ಕಾಂಗ್ರೆಸ್‌ ಶಾಸಕಾಂಗ ಸಭೆ 

06:15 AM Sep 25, 2018 | Team Udayavani |

ಬೆಂಗಳೂರು: ರಾಜ್ಯ ವಿಧಾನಪರಿಷತ್‌ಗೆ ಮೂವರ ನಾಮಕರಣ ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲು ಮಂಗಳವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

Advertisement

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಗರದ ಖಾಸಗಿ ಹೊಟೆಲ್‌ನಲ್ಲಿ ಸಭೆ ನಡೆಯಲಿದ್ದು, ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರುವುದರಿಂದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿರುವುದರಿಂದ ಕಾಂಗ್ರೆಸ್‌ ನಾಯಕರು ನಿರಾಳವಾಗಿದ್ದು, ಮೂರು ಸ್ಥಾನಗಳಿಗೆ ನಾಮಕರಣ,
ಪಕ್ಷದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಳು ಹಾಗೂ ಶಾಸಕರ ಅಸಮಾಧಾನದ ಕುರಿತಂತೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next