Advertisement

ವಾಟಾಳ್‌ಗೆ ಇಂದು ಕರ್ನಾಟಕದ ಉಕ್ಕಿನ ಮನುಷ್ಯ ಪ್ರಶಸ್ತಿ

12:32 PM Apr 15, 2017 | |

ಬೆಂಗಳೂರು: ಕನ್ನಡ ಜಾಗೃತಿ ವೇದಿಕೆ ವತಿಯಿಂದ ಶನಿವಾರ ಬೆಳಗ್ಗೆ 11.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಅವರಿಗೆ “ಕರ್ನಾಟಕದ ಉಕ್ಕಿನ ಮನುಷ್ಯ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ವೇದಿಕೆ ಅಧ್ಯಕ್ಷ ಮಂಜುನಾಥ್‌ ದೇವ ತಿಳಿಸಿದ್ದಾರೆ.

Advertisement

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐದು ದಶಕಗಳಿಂದ ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ ವಿಚಾರವಾಗಿ ಹೋರಾಟ ಮಾಡುತ್ತಿರುವ ಅಗ್ರಗಣ್ಯ ನಾಯಕ ವಾಟಾಳ್‌ ನಾಗರಾಜ್‌ ಅವರು, ನಾಡಿಗೆ ಸಲ್ಲಿಸಿರುವ ಸೇವೆ ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದರು. 

ಪ್ರಶಸ್ತಿ ಪ್ರದಾನ ಸಮಾರಂಭದ ದಿನ ವಾಟಾಳ್‌ ನಾಗರಾಜ್‌ ಅವರನ್ನು ಸಿಟಿ ಮಾರ್ಕೆಟ್‌ನಿಂದ ಬೆಳ್ಳಿ ರಥದಲ್ಲಿ ಜಾನಪದ ಕಲಾತಂಡಗಳೊಂದಿಗೆ, ಮಹಿಳೆಯರಿಂದ ಪೂರ್ಣಕುಂಭ ಸ್ವಾಗತ ನೀಡಿ ಮೆರವಣಿಗೆಯಲ್ಲಿ ರವೀಂದ್ರ ಕಲಾಕ್ಷೇತ್ರಕ್ಕೆ ಕರೆತರಲಾಗುವುದು.

ಅಂದಿನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂ.ವಿ.ರಾಜಶೇಖರನ್‌, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು , ರೈತಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಸೇರಿದಂತೆ  ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next