Advertisement

ಶುಕ್ರವಾರದ ರಾಶಿಫಲ: ಯಾರಿಗೆ ಶುಭ- ಯಾರಿಗೆ ಲಾಭ?

06:31 AM May 28, 2021 | Team Udayavani |

28-05-2021

Advertisement

ಮೇಷ: ಕೌಟುಂಬಿಕ ಜೀವನದಲ್ಲಿ ಏರಿಳಿತಗಳ ಅನುಭವ ತಂದು ಕೊಡಲಿದೆ. ಹಾಗೇ ಹೆಚ್ಚಿನ ಉಸ್ತುವಾರಿಯ ಅಗತ್ಯವಿದೆ. ಧಾರ್ಮಿಕ ಹಾಗೂ ಆಧ್ಯಾತ್ಮಿಕ ವಿಷಯದತ್ತ ಮನುಸ್ಸು ಹೆಚ್ಚು ವಾಲುವುದು. ಶುಭವಿದೆ.

ವೃಷಭ: ಆರ್ಥಿಕವಾಗಿ ಸಂಗ್ರಹವು ಕರಗಿ ಹೋಗಲಿದೆ. ಸ್ತ್ರೀಯರಿಗೆ ಹಲವು ಖರ್ಚುಗಳು ಬರಲಿವೆ. ನೂತನ ದಂಪತಿಗಳಿಗೆ ಸಿಹಿವಾರ್ತೆ, ಬಂಧುಮಿತ್ರರಿಂದ ಪ್ರಶಂಸೆಗೆ ಒಳಗಾಗುವಿರಿ. ನೆಮ್ಮದಿಗೆ ಭಂಗ ಬಂದೀತು.

ಮಿಥುನ: ಪ್ರಯತ್ನಿಸುವ ಅನೇಕ ಕೆಲಸ ಕಾರ್ಯಗಳಲ್ಲಿ ಸಾಫ‌ಲ್ಯ ಕಾಣುವಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಆಸಕ್ತಿ ತಂದುಕೊಡಲಿದೆ. ಕಣ್ಣೆದುರೇ ನಡೆಯುವ ಮೋಸ, ವಂಚನೆಗಳನ್ನು ಎದುರಿಸುವ ಅಗತ್ಯವಿದೆ.

ಕರ್ಕ: ಸಾಮಾಜಿಕವಾಗಿ ಜನಮನ್ನಣೆಗೆ ಪಾತ್ರರಾಗುವಿರಿ. ವಿದ್ಯಾರ್ಥಿಗಳು ಮಿತ್ರ ಸಹವಾಸದಿಂದ ಅಡ್ಡದಾರಿ ಹಿಡಿಯುವ ಪ್ರವೃತ್ತಿ ತೋರಿಬಾರದಂತೆ ಕಾಳಜಿ ವಹಿಸಿರಿ. ಸೋಲನ್ನು ಒಪ್ಪಿ ಗುರಿಯನ್ನು ಸಾಧಿಸಿದರೆ ಯಶಸ್ಸು .

Advertisement

ಸಿಂಹ: ಗ್ರಹಗಳ ಪ್ರತಿಕೂಲತೆಯಿಂದ ಆಲಸಿಯಾದವನ ಕಾರ್ಯಕ್ಷಮತೆ ಕ್ಷೀಣಿಸುತ್ತಲೇ ಹೋಗುವುದು ಅವಿವಾಹಿತರಿಗೆ ವೈವಾಹಿಕ ಸಂಬಂಧಿತ ಮಾತುಕತೆಗಳು ಕಂಕಣಬಲದಲ್ಲಿ ಪೂರ್ಣವಾಗಲಿದೆ. ಶುಭವಿದೆ.

ಕನ್ಯಾ: ಐಶಾರಾಮದಿಂದ ದೈಹಿಕ ಪೀಡೆಗಳಿಗೆ ಒಳಗಾಗದಂತೆ ಕಾಳಜಿ ವಹಿಸಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಬಗ್ಗೆ ಶಿಸ್ತು ಪಾಲಿಸುವಂತೆ ಹೇಳುವ ಪ್ರಸಂಗ ಬರುತ್ತದೆ. ದುಂದುವೆಚ್ಚದ ಮೇಲೆ ಕಡಿವಾಣ ಹಾಕುವುದು.

ತುಲಾ: ಉದ್ಯೋಗಿಗಳು ಕೆಲಸದ ಮಹತ್ವವನ್ನು ತಿಳಿಯುವುದು ಲೇಸು. ಯುವಕ ಯುವತಿಯರು ಪರಸ್ಪರ ಪ್ರೇಮದ ಸುಳಿಯಲ್ಲಿ ಸಿಲುಕಿಯಾರು. ಒಂಟಿಯಾದ ಯೋಗ್ಯ ವಯಸ್ಕರಿಗೆ ಮದುವೆಯ ಆಸರೆ ಬೇಕೆನಿಸುವುದು.

ವೃಶ್ಚಿಕ: ಆರ್ಥಿಕವಾಗಿ ಸಂಪನ್ಮೂಲಗಳನ್ನು ಪ್ರಕಟಗೊಳಿಸಲು ಹೆಚ್ಚು ಹೆಚ್ಚು ಕಾರ್ಯಗಳನ್ನು ಕೈಗೆತ್ತಿಕೊಳ್ಳ ಬೇಕಾದೀತು. ಹಾಗೂ ಸಮತೋಲನ ಜೀವನವನ್ನು ನಡೆಸಿಕೊಂಡು ಹೋಗಲು ಅಧ್ಯಾತ್ಮಿಕದ ಚಿಂತನೆಯು ಅನಿವಾರ್ಯವಾದೀತು.

ಧನು: ವಿದ್ಯಾರ್ಥಿಗಳ ಓದಿನ ವ್ಯಾಪ್ತಿ ಮುಂದಿನ ಭವಿಷ್ಯಕ್ಕೆ ಸಾಧಕವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಅವಿವೇಕಿಗಳ ಮಾತಿಗೆ ಕಿವಿಗೊಡದಿರುವುದು ಲೇಸು. ನಿಮ್ಮ ಮಕ್ಕಳಿಂದ ನಿಮಗೆ ಗೌರವ ಹೆಚ್ಚಾಗಲಿದೆ. ಯಶಸ್ಸು ಸಿಗಲಿದೆ.

ಮಕರ: ಅವಿವಾಹಿತರ ಅದೃಷ್ಟ ಬಲವು ಖುಲಾಯಿಸಲಿದೆ. ಆತ್ಮೀಯರ ಹಾಗೂ ಕುಟುಂಬ ಸದಸ್ಯರ ಆಗಮನ ಮನೆಯಲ್ಲಿ ಸಂತಸ ತರಲಿದೆ. ವೃತ್ತಿರಂಗದಲ್ಲಿ ಹೆಚ್ಚು ಕೆಲಸ ಬಂದರೂ ಅವೆಲ್ಲವನ್ನೂ ನಿಭಾಯಿಸುವ ಛಾತಿ ನಿಮ್ಮಲಿದೆ.

ಕುಂಭ: ನೀರಸವಾದ ನಿರುದ್ಯೋಗಿಗಳ ದೈನಂದಿನ ಬದುಕಿನಲ್ಲಿ ಆಶಾಕಿರಣವು ಮೂಡಿ ಬರಲಿದೆ. ಕಿಟಕಿ ಪ್ರೇಮಿಗಳ ಮದುವೆಯು ಅನಿವಾರ್ಯವಾಗಲಿದೆ. ವಿದ್ಯಾರ್ಥಿಗಳು ದುಶ್ಚಟ ಹಾಗೂ ದುರ್ವ್ಯಸನಗಳಿಂದ ದೂರವಿರಿ.

ಮೀನ: ಮದುವೆ ಮೊದಲಿನ ಪರೀಕ್ಷಾರ್ಥ ಹೊಂದಾಣಿಕೆಗಳು ಅವಿವಾಹಿತರಿಗೆ ಕಂಕಣಬಲಕ್ಕೆ ಪೂರಕವಾಗಲಿದೆ. ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ವ್ಯಾಪಾರಸ್ಥರಿಗೆ ಸ್ವಲ್ಪ ಸಮಾಧಾನ ತರಲಿದೆ. ವೃತ್ತಿಯಲ್ಲಿ ಮುನ್ನಡೆಯಿದೆ.

ಎನ್‌.ಎಸ್‌. ಭಟ್‌

Advertisement

Udayavani is now on Telegram. Click here to join our channel and stay updated with the latest news.

Next