Advertisement

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ

06:43 PM May 23, 2024 | Suhan S |

ಮೇಷ:  ಉದ್ಯೋಗ ಸ್ಥಾನದಲ್ಲಿ  ಕಿರಿಯರಿಗೆ  ಮಾರ್ಗದರ್ಶನ  ಮಾಡುವ ಹೊಣೆಗಾರಿಕೆ. ಹೆಚ್ಚುವರಿ ಆದಾಯದ ಮಾರ್ಗ ಅನ್ವೇಷಣೆ.   ವ್ಯವಹಾರ ಸಂಬಂಧ ಸಣ್ಣ  ಪ್ರಯಾಣ. ನ್ಯಾಯಾಲಯ ವ್ಯವಹಾರದಲ್ಲಿ ಜಯ.

Advertisement

ವೃಷಭ: ಬಂಧುಗಳ ಕಡೆಯಿಂದ  ಶುಭ ವಾರ್ತೆ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿ ಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ಕೇಟರಿಂಗ್‌ ವ್ಯವಹಾರಸ್ಥರಿಗೆ  ಸಾಮಾನ್ಯ ಲಾಭ.

ಮಿಥುನ:  ಸಾಹಿತ್ಯಸಂಬಂಧಿ  ಚಟುವಟಿಕೆ ಗಳಲ್ಲಿ  ತೊಡಗಿಸಿಕೊಳ್ಳುವಿಕೆ. ಉದ್ಯೋಗಸ್ಥರಿಗೆ  ಸಂತೃಪ್ತಿ, ಸಮಾಧಾನದ ಅನುಭವ. ಸ್ವಂತ ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ.  ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ.

ಕರ್ಕಾಟಕ:  ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಗಳು ಕ್ಷಿಪ್ರ ಗತಿಯಲ್ಲಿ ಪ್ರಗತಿ. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ.  ಸಣ್ಣ ಪ್ರಮಾಣದ ಕೃಷಿ ಕಾರ್ಯದಲ್ಲಿ ಲಾಭ. ಸ್ವಪ್ರಯತ್ನದಿಂದ ಆರೋಗ್ಯವೃದ್ಧಿ.

ಸಿಂಹ: ಉದ್ಯೋಗ ಸ್ಥಾನದಲ್ಲಿ ವಿಶೇಷ ಮನ್ನಣೆ. ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.ಉದ್ಯೋಗಾಸಕ್ತರಿಗೆ  ಹೊಸ ಅವಕಾಶಗಳು ಗೋಚರ. ನ್ಯಾಯಾಲಯದಲ್ಲಿ ತೀರ್ಮಾನ ಮುಂದಕ್ಕೆ.ಸಾಮಾಜಿಕ ಪಿಡುಗುಗಳ ನಿವಾರಣೆಗೆ ಸಾಮೂಹಿಕ ಚಿಂತನೆ.

Advertisement

ಕನ್ಯಾ: ಉದ್ಯೋಗ ಸ್ಥಾನದಲ್ಲಿ  ಹಿತಕರ ವಾತಾವರಣ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ. ಸಟ್ಟಾ ವ್ಯವಹಾರದಿಂದ ದೂರ ವಿರುವುದರಿಂದ ಹಿತ. ಪಾಲುದಾರಿಕೆಯಲ್ಲಿ ಸಣ್ಣ ಪ್ರಮಾಣದ ಹೊಸ ಉದ್ಯಮ ಆರಂಭ.

ತುಲಾ:  ಉದ್ಯೋಗದಲ್ಲಿ ಜ್ಞಾನ ಮತ್ತು ಪ್ರತಿಭೆಗೆ ಮನ್ನಣೆ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ವಸ್ತ್ರ, ಆಭರಣ ಖರೀದಿ. ಮಹಿಳೆಯರ ನೇತೃತ್ವದ  ಉದ್ಯಮಗಳಿಗೆ ಉತ್ಕರ್ಷದ ಕಾಲ.ಸಂಸಾರ ದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ.

ವೃಶ್ಚಿಕ:  ಸರಕಾರಿ ಉದ್ಯೋಗಿಗಳಿಗೆ ವರ್ಗಾವಣೆಯ ಆತಂಕ. ವಾಹನ ಬಿಡಿಭಾಗ ವ್ಯಾಪಾರಿಗಳಿಗೆ  ಸುಯೋಗ.  ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ. ಹಿರಿಯರ ಆರೋಗ್ಯ ಸುಧಾರಣೆ.

ಧನು: ಸಹೋದ್ಯೋಗಿಗಳಿಂದ ಪ್ರೀತಿ, ಗೌರವದ  ವರ್ತನೆ. ಸ್ವಂತದ ಚಿಕ್ಕ  ಉದ್ಯಮದ ಕ್ಷಿಪ್ರ ಪ್ರಗತಿ.  ಉದ್ಯೋಗಾಸಕ್ತ ಶಿಕ್ಷಿತರಿಗೆ ಒಳ್ಳೆಯ ಅವಕಾಶಗಳು ಗೋಚರ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ.

ಮಕರ:  ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ ನಿಯೋಜನೆ. ವಸ್ತ್ರ, ಸಿದ್ಧ ಉಡುಪು, ಆಭರಣ, ಪಾದರಕ್ಷೆ, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಹೇರಳ ಲಾಭ.  ಉದ್ಯೋಗ ಅರಸು ತ್ತಿರುವವರಿಗೆ ಅವಕಾಶಗಳು ಲಭ್ಯ.

ಕುಂಭ: ಸಂಸಾರದಲ್ಲಿ ಸಂತೃಪ್ತಿಯ ವಾತಾವರಣ. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ. ಗ್ರಾಹಕರ ಅಪೇಕ್ಷೆ ಗುರಿ ಸ್ಪಂದನ. ಉದ್ಯೋಗದಲ್ಲಿ  ಹೆಚ್ಚುವರಿ ಜವಾಬ್ದಾರಿಗಳು. ಸಮಾಜ ಸೇವಾಕಾರ್ಯಗಳಿಗೆ  ಮತ್ತಷ್ಟು ಅವಕಾಶಗಳು. ಮಕ್ಕಳ  ಬಗ್ಗೆ  ಗಮನಹರಿಸಿ.

ಮೀನ:  ಉದ್ಯೋಗದಲ್ಲಿ ಸಮಾಧಾನ. ಪರಿಚಿತ  ವ್ಯಕ್ತಿಗಳಿಂದ ಸಕಾಲದಲ್ಲಿ ಸಹಾಯ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ.   ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಪೂರ್ವ ಸಿದ್ಧತೆಮ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ.

Advertisement

Udayavani is now on Telegram. Click here to join our channel and stay updated with the latest news.

Next