Advertisement

Horoscope: ಸತ್ಯ ನುಡಿದು ನಿಷ್ಠುರಕ್ಕೆ ಗುರಿಯಾಗುವ ಭೀತಿ

07:46 AM Sep 02, 2024 | Team Udayavani |

ಮೇಷ: ಹೊಸ ಸಪ್ತಾಹದ ಮೊದಲ ದಿನ ಅದೃಷ್ಟವನ್ನು ತರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯಗಳು ಶೀಘ್ರವಾಗಿ ಮುಕ್ತಾಯ. ಉದ್ಯಮದ  ನೌಕರರಿಗೆ ವಿಶೇಷ ಅನುಕೂಲತೆಗಳು. ಮಹಿಳೆಯರ  ಸ್ವಾವಲಂಬನೆ ಯೋಜನೆ ಮುನ್ನಡೆ.

Advertisement

ವೃಷಭ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ..  ಕೃಷಿ ಕ್ಷೇತ್ರದ ಪ್ರಯೋಗಗಳು ಯಶಸ್ವಿ. ಸರಕಾರಿ ಯೋಜನೆಗಳ ಸೌಲಭ್ಯಗಳ ಬದಲು ಆತ್ಮನಿರ್ಭರತೆಗೆ ಪ್ರಾಶಸ್ತ್ಯ. ಸತ್ಯ ನುಡಿದು ನಿಷ್ಠುರಕ್ಕೆ ಗುರಿಯಾಗುವ ಭೀತಿ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ.

ಮಿಥುನ: ಧೈರ್ಯ, ಸಾಹಸ, ಪ್ರಾಮಾಣಿಕತೆಗೆ ಜಯ. ಉದ್ಯಮ ಅಭಿವೃದ್ಧಿಗೆ ಸಾಂಸ್ಥಿಕ  ನೆರವು ಪ್ರಾಪ್ತಿ. ವಸ್ತ್ರ ,  ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಅಧಿಕ  ಲಾಭ. ವ್ಯಾಪಾರಿಗಳ ಮನೆಯಲ್ಲಿ  ಸಂತೋಷದ ವಾತಾವರಣ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.

ಕರ್ಕಾಟಕ: ಸಮಗ್ರ ಪ್ರಗತಿಯತ್ತ ದಾಪುಗಾಲು. ಉದ್ಯೋಗದಲ್ಲಿ ಕ್ರಮಶ: ಉನ್ನತಿ. ಅಕಸ್ಮಾತ್‌ ಧನಾಗಮ ಯೋಗ.  ಕೃಷ್ಯುತ್ಪನ್ನ ಮಾರಾಟದಿಂದ ಉತ್ತಮ ಲಾಭ. ಆಸ್ತಿ ಪಾಲು ಮಾತುಕತೆಯಲ್ಲಿ ಭಾಗಿ.

ಸಿಂಹ: ಹಿಂದಡಿಯಿಡದೆ ಮುನ್ನಡೆಯುವ ಪ್ರವೃತ್ತಿಗೆ ಜಯ. ಉದ್ಯೋಗ ಕ್ಷೇತ್ರದಲ್ಲಿ ಗೌರವದ ಹುದ್ದೆ . ಉದ್ಯಮಕ್ಕೆ ಸರ್ವತೋಮುಖ  ಪ್ರಗತಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಹೇರಳ  ಲಾಭ. ಕೃಷಿ  ಕಾರ್ಮಿಕರಿಗೆ ಅನುಕೂಲದ ವಾತಾವರಣ..

Advertisement

ಕನ್ಯಾ: ಸ್ಥಿರ ಉದ್ಯೋಗದ ಯೋಗ. ಸಹೋದ್ಯೋಗಿಗಳಿಂದ ಪ್ರತಿಭೆಗೆ ಗೌರವ. ಸಣ್ಣ ಉದ್ಯಮಿಗಳಿಗೆ ಅನುಕೂಲದ ದಿನ. ಕುಶಲಕರ್ಮಿಗಳಿಗೆ ಯೋಗ್ಯ ಸ್ಥಾನದಲ್ಲಿ ಉದ್ಯೋಗಾವಕಾಶ. ಸಣ್ಣ ಪ್ರಯಾಣ ಸಂಭವ.

ತುಲಾ: ಉದ್ಯೋಗ ಸ್ಥಾನದಲ್ಲಿ ಯೋಗ್ಯತೆಗೆ ಸರಿಯಾದ ಗೌರವ ಪ್ರಾಪ್ತಿ. ಗುರುಸ್ಥಾನ ದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ.  ಹಿತಶತ್ರುಗಳ ಪರಾಭವ. ದೇವತಾ ಸಾನ್ನಿಧ್ಯ ದರ್ಶನ.  ಸಂಸಾರದಲ್ಲಿ  ಎಲ್ಲರಿಗೂ ಉತ್ತಮ ಆರೋಗ್ಯ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ.  ಸರಕಾರಿ ನೌಕರರಿಗೆ ವರ್ಗಾವಣೆ ಸಂಭವ. ಸಹಕಾರಿ ಸಂಸ್ಥೆಗಳ  ಸ್ಥಿತಿ ಸುಧಾರಣೆ. ಗೃಹಿಣಿಯರ ಸ್ವಾವಲಂಬನೆ ಯೋಜನೆಗಳಿಗೆ ಯಶಸ್ಸು. ಮಕ್ಕಳ ಹೊಸ ಉದ್ಯಮ ಯೋಜನೆ ಸಾಕಾರ.

ಧನು: ಕಠಿನ ಮಾರ್ಗದಲ್ಲಿ ಸಂಪಾದನೆ ವೃದ್ಧಿ.  ಸಹೋದ್ಯೋಗಿಗಳಿಂದ  ಸಂಪೂರ್ಣ ಸಹಕಾರ.  ಸಣ್ಣ ಉದ್ಯಮ ಘಟಕಕ್ಕೆ ಸಮರ್ಥರ ನೇಮಕ. ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ.ಖಾದ್ಯ ಪದಾರ್ಥ ಉದ್ಯಮಕ್ಕೆ ದೊಡ್ಡ ಪ್ರಮಾಣದಲ್ಲಿ ಲಾಭ.

ಮಕರ: ಉದ್ಯೋಗ ಸ್ಥಾನದಲ್ಲಿ ನವೀಕರಣ ಕಾರ್ಯ. ಉದ್ಯಮ ಉತ್ಪನ್ನಗಳ  ಮಾರಾಟ ವೃದ್ಧಿ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಪ್ರಮಾಣದಲ್ಲಿ ವರಮಾನ ವೃದ್ಧಿ.  ಪ್ರಾಪ್ತ ವಯಸ್ಕ ಕನ್ಯೆಯರಿಗೆ ವಿವಾಹ ಯೋಗ. ಅರ್ಹತೆಗೆ ಸರಿಯಾದ ಉದ್ಯೋಗ ಅನ್ವೇಷಣೆ.

ಕುಂಭ: ಕುಗ್ಗದ ಹುರುಪಿನೊಂದಿಗೆ  ಹೊಸ ಮಾಸದ ಕಾರ್ಯಾರಂಭ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕಾರ್ಯಗಳು  ಮುಕ್ತಾಯ. ಉದ್ಯಮದ ಉತ್ಪನ್ನಗಳ ಗ್ರಾಹಕರಿಂದ ನಿರೀಕ್ಷೆ ಮೀರಿದ ಬೇಡಿಕೆಗಳು. ಮುದ್ರಣ, ಸ್ಟೇಶನರಿ ವಿತರಕರಿಗೆ ಹೊಸಬರ ಸಂಪರ್ಕ.

ಮೀನ: ತಿಂಗಳುಗಳು ಉರುಳಿದಂತೆ   ಇನ್ನಷ್ಟು ಕಾರ್ಯಗಳ  ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ.ಸರಕಾರಿ ಇಲಾಖೆಗಳವರಿಂದ ಸಹಕಾರ. ಉಪಕೃತ  ಸಾರ್ವಜನಿಕರಿಂದ ಪ್ರಶಂಸೆ. ಕೃಷಿಕರ ಅನುಕೂಲಕ್ಕೆ ಹೊಸ ಕ್ರಮಗಳು.

Advertisement

Udayavani is now on Telegram. Click here to join our channel and stay updated with the latest news.

Next