Advertisement

Horoscope: ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ

07:48 AM Sep 10, 2024 | Team Udayavani |

ಮೇಷ: ಸಾಧನೆಗಳ ನೆನಪನ್ನು ಮೆಲುಕು ಹಾಕಿ ಸಮಾಧಾನ. ಉದ್ಯೋಗ ಕ್ಷೇತ್ರದಲ್ಲಿ ಅವಧಿಗೆ ಮೊದಲೇ ಕಾರ್ಯಗಳು ಮುಕ್ತಾಯ. ಉದ್ಯಮದ ನೌಕರರಿಗೆ ವಿಶೇಷ ಅನುಕೂಲತೆಗಳು. ಮಹಿಳೆಯರ ಸ್ವಾವಲಂಬನೆ ಯೋಜನೆ ಮುನ್ನಡೆ.

Advertisement

ವೃಷಭ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಕೃಷಿ ಕ್ಷೇತ್ರದ ಪ್ರಯೋಗಗಳು ಯಶಸ್ವಿ. ಸರಕಾರಿ ಯೋಜನೆಗಳ ಸೌಲಭ್ಯ ಪಡೆಯುವ ಪ್ರಯತ್ನ ವಿಫಲ. ಸತ್ಯ ನುಡಿದು ನಿಷ್ಠುರಕ್ಕೆ ಗುರಿಯಾಗುವ ಭೀತಿ. ಸಂಸಾರದಲ್ಲಿ ಸಂತೃಪ್ತಿಯ ವಾತಾವರಣ.

ಮಿಥುನ: ಆತ್ಮವಿಶ್ವಾಸದ ನಡೆಯಿಂದ ಕಾರ್ಯಸಿದ್ಧಿ. ಉದ್ಯಮ ಅಭಿವೃದ್ಧಿಗೆ ಸಾಂಸ್ಥಿಕ ನೆರವು ಪ್ರಾಪ್ತಿ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ವ್ಯಾಪಾರಿಗಳ ಮನೆಯಲ್ಲಿ ಸಂತೋಷದ ವಾತಾವರಣ.

ಕರ್ಕಾಟಕ: ಕ್ಷಿಪ್ರವಾಗಿ ಉತ್ಕರ್ಷ ಹೊಂದುವ ಕನಸು ಸಾಕಾರ. ಉದ್ಯೋಗದಲ್ಲಿ ಉನ್ನತಿಯ ಸೂಚನೆ. ಅಕಸ್ಮಾತ್‌ ಧನಾಗಮ ಯೋಗ. ತರಕಾರಿ, ಹಣ್ಣು ಮಾರಾಟದಿಂದ ಉತ್ತಮ ಲಾಭ. ಎಲ್ಲರಿಗೂ ಉತ್ತಮ ಆರೋಗ್ಯ.

ಸಿಂಹ: ಲೆಕ್ಕಾಚಾರದ ಕ್ರಮಗಳಿಂದ ಜಯ. ಉದ್ಯೋಗ ಕ್ಷೇತ್ರದಲ್ಲಿ ಅಗ್ರ ಸ್ಥಾನ. ಉದ್ಯಮಕ್ಕೆ ಸರ್ವತೋಮುಖ ಪ್ರಗತಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಕೃಷಿ ಕಾರ್ಮಿಕರಿಗೆ ಅನುಕೂಲದ ವಾತಾವರಣ.

Advertisement

ಕನ್ಯಾ: ವೃತ್ತಿಯಲ್ಲಿ ಪ್ರಾವೀಣ್ಯದಿಂದಾಗಿ ವಿಶೇಷ ಮನ್ನಣೆ. ಸಹೋದ್ಯೋಗಿಗಳಿಂದ ಗೌರವ. ಸಣ್ಣ ಉದ್ಯಮಿಗಳಿಗೆ ಅನುಕೂಲದ ದಿನ. ಕುಶಲಕರ್ಮಿಗಳಿಗೆ ಯೋಗ್ಯ ಸ್ಥಾನದಲ್ಲಿ ಉದ್ಯೋಗಾವಕಾಶ. ಕುಲದೇವರ ದರ್ಶನ ಸಂಭವ.

ತುಲಾ: ಆಸಕ್ತಿಯ ವಿದ್ಯೆಯನ್ನು ಕಲಿಯುವ ದಿನ. ಉದ್ಯೋಗ ಸ್ಥಾನದಲ್ಲಿ ಯೋಗ್ಯತೆಗೆ ಸರಿಯಾದ ಗೌರವ ಪ್ರಾಪ್ತಿ. ಗುರುಸ್ಥಾನದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ. ದೇವತಾ ಸಾನ್ನಿಧ್ಯ ದರ್ಶನ. ಸಂಸಾರದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಹಿಂದಿನದೇ ಸ್ಥಿತಿ ಮುಂದುವರಿಕೆ. ಸರಕಾರಿ ನೌಕರರಿಗೆ ವರ್ಗಾವಣೆ ಸಂಭವ. ಸಹಕಾರಿ ಸಂಸ್ಥೆಗಳ ಸ್ಥಿತಿ ಸುಧಾರಣೆ. ಗೃಹಿಣಿಯರ ಸ್ವಾವಲಂಬನೆ ಯೋಜನೆಗಳು ಯಶಸ್ಸಿನ ಪಥದಲ್ಲಿ.ಮಕ್ಕಳ ಹೊಸ ಉದ್ಯಮ ಯೋಜನೆ ಸನ್ನಿಹಿತ.

ಧನು: ಪರಿಶ್ರಮವಿಲ್ಲದೆ ಬದುಕಿಲ್ಲ. ಹೊಸ ಕಾರ್ಯ ಮುಕ್ತಾಯಕ್ಕೆ ಸಹೋದ್ಯೋಗಿಳ ಸಂಪೂರ್ಣ ಸಹಕಾರ. ಸಣ್ಣ ಉದ್ಯಮ ಘಟಕಕ್ಕೆ ಸಮರ್ಥರ ನೇಮಕ.ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ. ಖಾದ್ಯ
ಪದಾರ್ಥ ಉದ್ಯಮಕ್ಕೆ ದೊಡ್ಡ ಪ್ರಮಾಣದಲ್ಲಿ ಲಾಭ.

ಮಕರ: ಉದ್ಯೋಗ ಸ್ಥಾನದಲ್ಲಿ ಹೊಸ ಕಾರ್ಯಗಳ ನಿಯೋಜನೆ. ಉದ್ಯಮ ಉತ್ಪನ್ನಗಳ ಮಾರಾಟ ವೃದ್ಧಿ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಪ್ರಮಾಣದಲ್ಲಿ ವರಮಾನ ವೃದ್ಧಿ. ಪ್ರಾಪ್ತ ವಯಸ್ಕ ಹುಡುಗರಿಗೆ ವಿವಾಹ ಯೋಗ.

ಕುಂಭ: ಕುಗ್ಗದ ಹುರುಪಿನೊಂದಿಗೆ ದಿನಾರಂಭ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕಾರ್ಯಗಳು ಬಹುಪಾಲು ಮುಕ್ತಾಯ. ಉದ್ಯಮದ ಉತ್ಪನ್ನಗಳ ಗ್ರಾಹಕರಿಂದ ನಿರೀಕ್ಷೆ ಮೀರಿದ ಬೇಡಿಕೆಗಳು. ಮುದ್ರಣಸಾಮಗ್ರಿ, ಸ್ಟೇಶನರಿ ವಿತರಕರಿಗೆ ಹೊಸಬರ ಸಂಪರ್ಕ. ಸಮಾಜಸೇವಾ ಕಾರ್ಯಗಳ ನಾಯಕತ್ವ.

ಮೀನ: ಈ ಸಪ್ತಾಹದಲ್ಲಿ ಇನ್ನಷ್ಟು ಕಾರ್ಯಗಳ ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ. ಸರಕಾರಿ ಇಲಾಖೆ ಗಳವರಿಂದ ಸಹಕಾರ. ಉಪಕೃತ ಸಾರ್ವಜನಿಕರಿಂದ ಪ್ರಶಂಸೆ. ಕೃಷಿಕರ ಅನುಕೂಲಕ್ಕೆ ಹೊಸ ಕ್ರಮಗಳು.

Advertisement

Udayavani is now on Telegram. Click here to join our channel and stay updated with the latest news.

Next