Advertisement

ಇಂದು ಜೆಡಿಎಸ್‌ ಆತ್ಮಾವಲೋಕನ ಸಭೆ

07:00 AM Jun 14, 2018 | Team Udayavani |

ಬೆಂಗಳೂರು: ಇದುವರೆಗೆ ಸರ್ಕಾರ ರಚನೆ, ಸಂಪುಟ ವಿಸ್ತರಣೆಯಲ್ಲಿ ಮುಳುಗಿದ್ದ ಜೆಡಿಎಸ್‌ ಈಗ ವಿಧಾನಸಭೆ
ಚುನಾವಣೆ ಸೋಲು-ಗೆಲುವಿನ ಬಗ್ಗೆ ಪರಾಮರ್ಶೆ ನಡೆಸಲು ಮುಂದಾಗಿದೆ.

Advertisement

ಜೆಡಿಎಸ್‌ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ನೇತೃತ್ವದಲ್ಲಿ ಗುರುವಾರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದವರು ಮತ್ತು ಸೋತವರ ಸಭೆ ಆಯೋಜಿಸಲಾಗಿದ್ದು, ಸಭೆಯಲ್ಲಿ ಆತ್ಮಾವಲೋಕನ ನಡೆಯಲಿದೆ. 

ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಈ ಆತ್ಮಾವಲೋಕನ ಸಭೆ ನಡೆಯಲಿದೆ. ಸೋಲು-ಗೆಲುವಿನ ಬಗ್ಗೆ ವಿಮರ್ಶೆ ಜತೆಗೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಬಗ್ಗೆಯೂ ಸಮಾಲೋಚನೆ ನಡೆಯಲಿದೆ. ಅಲ್ಲದೆ, ಮುಂಬರುವ ಲೋಕಸಭೆ ಚುನಾವಣೆ ಬಗ್ಗೆಯೂ ಚರ್ಚೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next