Advertisement

ಇಂದು ಎರಡನೇ ಹಂತದ 14 ಕ್ಷೇತ್ರಗಳಿಗೆ ಮತದಾನ

07:57 AM Apr 23, 2019 | Team Udayavani |

ಬೆಂಗಳೂರು: ಪ್ರಜಾಪ್ರಭುತ್ವದ ಅತೀ ದೊಡ್ಡ ಸಂಭ್ರಮ “ಮತ ಹಬ’ºದ ಎರಡನೇ ಕಂತು ಎದುರಾಗಿದೆ. ಮಂಗಳವಾರ ಉತ್ತರಾರ್ಧದ 14 ಕ್ಷೇತ್ರಗಳ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

Advertisement

ಚಿಕ್ಕೋಡಿ, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್‌, ವಿಜಾಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಹಾವೇರಿ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಘಟಾನುಘಟಿ ನಾಯಕರ ಭವಿಷ್ಯ ನಿರ್ಧಾರವಾಗಲಿದೆ. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.

ಕಣದಲ್ಲಿರುವ ಪ್ರಮುಖರು
ಮಲ್ಲಿಕಾರ್ಜುನ ಖರ್ಗೆ, ಅನಂತ ಕುಮಾರ್‌ ಹೆಗಡೆ, ರಮೇಶ್‌ ಜಿಗಜಿಣಗಿ, ಜಿ.ಎಂ. ಸಿದ್ದೇಶ್ವರ್‌, ಮಧು ಬಂಗಾರಪ್ಪ, ಬಿ.ವೈ. ರಾಘವೇಂದ್ರ, ವಿ.ಎಸ್‌.ಉಗ್ರಪ್ಪ , ಈಶ್ವರ್‌ ಖಂಡ್ರೆ, ಪ್ರಹ್ಲಾದ್‌ ಜೋಶಿ, ವಿನಯ ಕುಲಕರ್ಣಿ, ಸುರೇಶ್‌ ಅಂಗಡಿ, ಪ್ರಕಾಶ್‌ ಹುಕ್ಕೇರಿ, ಭಗವಂತ್‌ ರಾವ್‌ ಖೂಬಾ, ಗದ್ದಿ ಗೌಡರ್‌, ಕರಡಿ ಸಂಗಣ್ಣ ಸೇರಿ 237 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಚುನಾವಣೆಯ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next