Advertisement

“ಟೋಲ್‌ ರಿಯಾಯಿತಿ; ಜಿಲ್ಲಾಡಳಿತಕ್ಕೆ ಅಧಿಕಾರವಿಲ್ಲ’

01:40 AM Jul 20, 2019 | Team Udayavani |

ಸುರತ್ಕಲ್‌: ಸ್ಥಳೀಯ ಖಾಸಗಿ ಕಾರುಗಳಿಗೆ ಸುರತ್ಕಲ್‌ ಟೋಲ್‌ಗೇಟ್‌ನಲ್ಲಿ ಸುಂಕ ಪಡೆಯದಂತೆ ವಿಧಿಸಿದ್ದ ತಡೆ ಜು. 22ಕ್ಕೆ ಅಂತ್ಯಗೊಳ್ಳಲಿದೆ. ಮುಂದೆ ರಾಜ್ಯ ಸರಕಾರದ ಕಾರ್ಯದರ್ಶಿ ಸುಂಕ ವಸೂಲಿಗೆ ಪೊಲೀಸ್‌ ಭದ್ರತೆ ಒದಗಿಸಲು ಆದೇಶಿಸಿದರೆ ಜಿಲ್ಲಾಡಳಿತ ಒದಗಿಸಬೇಕಾಗುತ್ತದೆ. ಸ್ಥಳೀಯ ವಾಹನಗಳಿಗೆ ರಿಯಾಯಿತಿ ನೀಡುವ ಸಂಬಂಧ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಜಿಲ್ಲಾಡಳಿತಕ್ಕೆ ಇಲ್ಲ ಎಂಬುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಹೇಳಿದ್ದಾರೆ.

Advertisement

ಈ ಬಗ್ಗೆ “ಉದಯವಾಣಿ’ ಪ್ರತಿನಿಧಿ ಜತೆಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರು ಸ್ಥಳೀಯ ವಾಹನಗಳಿಗೆ ಟೋಲ್‌ ವಸೂಲಿಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಮಾಡಿದ್ದರಿಂದ ಮೂರ್‍ನಾಲ್ಕು ದಿನ ತಡೆ ಹಿಡಿಯಲಾಗಿದೆ. ಆದರೆ ರಿಯಾಯಿತಿಯನ್ನು ಹೆಚ್ಚು ದಿನ ಮುಂದೂಡಲು ಸಾಧ್ಯವಿಲ್ಲ.

ಕೇಂದ್ರದ ಎನ್‌ಎಚ್‌ಎಐ ನಿರ್ದೇಶನದಂತೆ ನಾವು ನಡೆದುಕೊಳ್ಳಬೇಕಿದೆ ಎಂದಿದ್ದಾರೆ.

ಟೋಲ್‌ ಸಂಗ್ರಹಿಸಬಾರದು ಎಂದು ಹೇಳುವ ಅಥವಾ ನಿರ್ಧರಿಸುವ ಅಧಿಕಾರ ಜಿಲ್ಲಾಡಳಿತಕ್ಕೆ ಇಲ್ಲ. ಸೋಮವಾರದವರೆಗೆ ಕಾದು ನೋಡುತ್ತೇವೆ. ಎನ್‌ಎಚ್‌ಎಐ ಸುಂಕ ವಸೂಲಿಗೆ ಭದ್ರತೆ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿಯವರಿಗೆ ಈಗಾಗಲೇ ಸೂಚಿಸಿದೆ. ಅವರು ಜಿಲ್ಲಾಡಳಿಕ್ಕೆ ಮತ್ತೆ ಸೂಚಿಸಿದರೆ ಭದ್ರತೆ ನೀಡಬೇಕಾಗುತ್ತದೆ. ರಿಯಾಯಿತಿ ನೀಡಿ ಎಂದು ಯಾವುದೇ ಸ್ಪಷ್ಟ ನಿರ್ಧಾರವನ್ನು ಕೇಂದ್ರ ನೀಡಿಲ್ಲ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next