Advertisement

ಸೋನಿಯಾ, ದೀದಿ ಆಪ್ತರು ಬಿಜೆಪಿ ಬಲೆಗೆ

12:30 AM Mar 15, 2019 | |

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ದೇಶಾದ್ಯಂತ ಪಕ್ಷಾಂತರಿಗಳೇ ಸದ್ದು ಮಾಡುತ್ತಿದ್ದಾರೆ. ಇದಕ್ಕೆ ಗುರುವಾರ ಹೊಸ ಸೇರ್ಪಡೆಯಾಗಿದೆ. ಕಾಂಗ್ರೆಸ್‌ಗೆ ತೀವ್ರ ಮುಜುಗರವೆಂಬಂತೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪರಮಾಪ್ತ ಮತ್ತು ಪಕ್ಷದ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಕೇರಳದ ಕಾಂಗ್ರೆಸ್‌ ನಾಯಕ ಟಾಮ್‌ ವಡಕ್ಕನ್‌ ಅವರು ದಿಢೀರನೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಗುರುವಾರ ನಡೆದ ಈ ಬೆಳವಣಿಗೆಯು ಕಾಂಗ್ರೆಸ್‌ಗೆ ಆಘಾತ ತಂದಿದೆ.

Advertisement

ಇನ್ನೊಂದೆಡೆ, ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಆಪ್ತರಾಗಿದ್ದ, ಟಿಎಂಸಿ ಪ್ರಮುಖ ನಾಯಕ ಮತ್ತು 4 ಬಾರಿ ಶಾಸಕರಾಗಿ ಆಯ್ಕೆ ಯಾಗಿರುವ ಅರ್ಜುನ್‌ ಸಿಂಗ್‌ ಗುರುವಾರ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಲೋಕಸಭೆ ಚುನಾವಣೆ ವೇಳೆ ಪಶ್ಚಿಮ ಬಂಗಾಲದಲ್ಲಿ ಪ್ರಾಬಲ್ಯ ಹೆಚ್ಚಿಸಲು ಯತ್ನಿಸುತ್ತಿರುವ ಬಿಜೆಪಿಗೆ ಇವರ ಸೇರ್ಪಡೆಯು ವರದಾನವಾಗಲಿದೆ ಎಂದೇ ವಿಶ್ಲೇಷಿಸ ಲಾಗುತ್ತಿದೆ. ಇದರ ನಡುವೆಯೇ, ಉತ್ತರಾಖಂಡದ ಬಿಜೆಪಿ ಹಿರಿಯ ನಾಯಕ ಚಂದ್ರ ಖಂಡೂರಿ ಪುತ್ರ ಮನೀಷ್‌ ಖಂಡೂರಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ಗುರುವಾರ ಹರಿದಾಡಿವೆ. 

ಬಿಜೆಪಿಗೆ ಸೇರ್ಪಡೆಯಾದ ಟಾಮ್‌ ವಡಕ್ಕನ್‌ ಮತ್ತು ಅರ್ಜುನ್‌ ಸಿಂಗ್‌, ಪುಲ್ವಾಮಾ ದಾಳಿ ಬಳಿಕ ತಮ್ಮ ತಮ್ಮ ಪಕ್ಷಗಳು ಮತ್ತು ನಾಯಕರು ನೀಡಿರುವ ಹೇಳಿಕೆಗಳಿಂದ ನೊಂದು ಪಕ್ಷ ತ್ಯಜಿಸಿರುವುದಾಗಿ ಹೇಳಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next