Advertisement

ಬುಧವಾರ ಸಂಜೆ ನಾಲ್ಕು ಗಂಟೆಗೆ ನೂತನ ಸಚಿವರ ಪದಗ್ರಹಣ: ಯಡಿಯೂರಪ್ಪ

10:38 AM Jan 12, 2021 | Team Udayavani |

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ನೂತನ ಸಚಿವರ ಸೇರ್ಪಡೆಗೆ ಮುಹೂರ್ತ ಸಿದ್ದವಾಗಿದ್ದು ಬುಧವಾರ (ಜ.13) ಸಂಜೆ ನಾಲ್ಕು ಗಂಟೆಗೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

Advertisement

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆ ಸಂಜೆ ನಾಲ್ಕು ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ನೂತನ ಸಚಿವರ ಪಟ್ಟಿ ನಾಳೆ ಬಿಡುಗಡೆ ಮಾಡಲಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಗೆ ಆ್ಯಪ್‌ ಸಿದ್ಧ

ಕಳೆದ ರವಿವಾರ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದರು. ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಜೊತೆ ಚರ್ಚೆ ನಡೆಸಿದ್ದರು. ಅದೇ ದಿನ ಸಂಜೆ ಬೆಂಗಳೂರಿಗೆ ಮರಳಿದ ನಂತರ ಸಂಪುಟ ವಿಸ್ತರಣೆಯ ಬಗ್ಗೆ ಮಾಹಿತಿ ನೀಡಿದ್ದರು.

ಏಳು ಜನರಿಗೆ ಸಚಿವ ಸ್ಥಾನ ನೀಡಲು ವರಿಷ್ಠರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಬಿಎಸ್ ವೈ ಹೇಳಿದ್ದರು. ಇದಾದ ಬಳಿಕ ಬಾರಿ ಸಚಿವಗಿರಿಗಾಗಿ ಲಾಬಿ ನಡೆಯುತ್ತಿದ್ದು, ಸಂಪುಟ ವಿಸ್ತರಣೆಯೋ ಅಥವಾ ಪನರಚನೆಯೋ ಎನ್ನುವ ಬಗ್ಗೆ ಇನ್ನೂ ಖಚಿತತೆ ಸಿಕ್ಕಿಲ್ಲ.

Advertisement

ಬಿಜೆಪಿ ಸರ್ಕಾರ ರಚನೆಗೆ ಸಹಾಯಕವಾದ ಮುನಿರತ್ನ, ಆರ್. ಶಂಕರ್, ಎಂಟಿಬಿ ನಾಗರಾಜ್ ಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next