Advertisement

ನಾಳೆ ಅಂತಿಮ ಹಂತದ ಮತ

09:05 AM May 19, 2019 | mahesh |
ನವದೆಹಲಿ/ಬೆಂಗಳೂರು: ಲೋಕಸಭೆ ಚುನಾವಣೆಯ ಕಡೇ ಹಂತ ಸಮೀಪಿಸಿದ್ದು, ಭಾನುವಾರದ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದೆ.

ಶುಕ್ರವಾರ ಸಂಜೆಯೇ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಪ್ರಧಾನಿ ಮೋದಿ, ಅಮಿತ್‌ ಶಾ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಜನರಿಗೆ ಧನ್ಯವಾದ ಹೇಳಿದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಕೂಡ ಜನರಿಗೆ ವಂದನೆ ಅರ್ಪಿಸಿದ್ದಾರೆ. ಭಾನುವಾರ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಮಧ್ಯಪ್ರದೇಶ, ಪಂಜಾಬ್‌ ಸೇರಿದಂತೆ ಕೆಲವು ಈಶಾನ್ಯ ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೇ 23ಕ್ಕೆ ಫ‌ಲಿತಾಂಶ ಪ್ರಕಟವಾಗಲಿದೆ.

Advertisement

ಇನ್ನು ರಾಜ್ಯದಲ್ಲೂ ಕುಂದಗೋಳ ಮತ್ತು ಚಿಂಚೋಳಿ ಉಪಚುನಾವಣೆಯೂ ಭಾನುವಾರವೇ ನಡೆಯಲಿದೆ. ಇಲ್ಲೂ ಪ್ರಚಾರ ಮುಗಿಸಿರುವ ಪಕ್ಷಗಳ ನಾಯಕರೆಲ್ಲರೂ ತಮ್ಮ ತಮ್ಮ ಊರುಗಳಿಗೆ ವಾಪಸ್‌ ತೆರಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next