Advertisement

ನಾಳೆ ರಂಜಾನ್‌ ಹಬ್ಬ

06:15 AM Jun 15, 2018 | Team Udayavani |

ಬೆಂಗಳೂರು: ಗುರುವಾರ ಸಂಜೆ ಚಂದ್ರದರ್ಶನವಾಗದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಶನಿವಾರ “ಈದುಲ್‌ ಫಿತ್ರ’ (ರಂಜಾನ್‌ ಹಬ್ಬ) ಆಚರಿಸಲಾಗುವುದು ಎಂದು ಕರ್ನಾಟಕ ರಾಜ್ಯ ಚಂದ್ರದರ್ಶನ ಸಮಿತಿ ಹೇಳಿದೆ.

Advertisement

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ ಸಮಿತಿಯ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಗುರುವಾರ ಚಂದ್ರದರ್ಶನವಾಗುವ ನಿರೀಕ್ಷೆಯಿತ್ತು. ಆದರೆ, ರಾಜ್ಯದ ಬಹುತೇಕ ಕಡೆ ದಟ್ಟ ಮೋಡ ಕವಿದ ವಾತಾವರಣ ಇದ್ದ ಹಿನ್ನೆಲೆಯಲ್ಲಿ ಚಂದ್ರದರ್ಶನ ಸಾಧ್ಯವಾಗಿಲ್ಲ. ಈ ಮಧ್ಯೆ ಶುಕ್ರವಾರ ಉಪವಾಸದ 30 ದಿನಗಳು ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಶನಿವಾರ ಹಬ್ಬ ಆಚರಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಮೌಲಾನ ಮಕ್ಸೂದ್‌ ಇಮ್ರಾನ್‌ ರಶಾದಿ ಉದಯವಾಣಿಗೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next