Advertisement

ಲಿಂಗಾಯತ ಧರ್ಮ ವಿಚಾರವಾಗಿ ಮೋದಿಗೆ ಟ್ವೀಟ್‌ನಲ್ಲಿ ಟಾಂಗ್‌

07:55 AM Apr 30, 2018 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಲಿಂಗಾಯತ ವಿಚಾರವಾಗಿ ತಿರುಗೇಟು ನೀಡಿ ಸಚಿವ ಎಂ.ಬಿ.ಪಾಟೀಲ್‌ ಟ್ವೀಟ್‌ ಮಾಡಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ಒಬ್ಬನೇ ಒಬ್ಬ ಸಚಿವರಿಲ್ಲ. ಪ್ರತ್ಯೇಕ ಧರ್ಮದ ವಿಚಾರದಲ್ಲೂ ಅವರು ಲಾಲಿಪಾಪ್‌ ತೋರಿಸಿ¨ªಾರೆ. ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಆದರೆ, ವೇದಿಕೆಯಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ದೂರ ಕೂರಿಸುತ್ತಿದ್ದಾರೆ. ಮೋದಿ ಏಕೆ ಲಿಂಗಾಯತ ವಿರೋಧಿಯಾಗಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಮೇ 1ರಿಂದ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಾದ್ಯಂತ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಮೋದಿ ಪ್ರವಾಸಕ್ಕೂ ಮುನ್ನ ಲಿಂಗಾಯತ ವಿಚಾರ ಪ್ರಸ್ತಾಪಿಸಿ ಸಚಿವ ಎಂ.ಬಿ.ಪಾಟೀಲ್‌ ಟ್ವೀಟ್‌ ಮಾಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next