Advertisement

ಟೂಲ್ ಕಿಟ್ ಪ್ರಕರಣ : ಪರಿಸರ ಕಾರ್ಯಕರ್ತೆ ದಿಶಾ ರವಿಗೆ ದೆಹಲಿ ಕೋರ್ಟ್ ಜಾಮೀನು..!

04:53 PM Feb 23, 2021 | Team Udayavani |

ನವ ದೆಹಲಿ : ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್‌ಕಿಟ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ್ರೋಹ ಮತ್ತು ಇತರ ಆರೋಪಗಳಿಗಾಗಿ ಪ್ರಕರಣ ದಾಖಲಾಗಿರುವ ಮೂವರು ಆರೋಪಿಗಳಲ್ಲಿ ಒಬ್ಬರಾದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರಿಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಮಂಗಳವಾರ(ಫೆ. 23) ಜಾಮೀನು ನೀಡಿದೆ.

Advertisement

ಟೂಲ್ ಕಿಟ್ ಹಂಚಿಕೊಂಡ ಆರೋಪದಡಿ ದೆಹಲಿ ಪೊಲೀಸರಿಂದ ಬಂಧನವಾಗಿರುವ ದಿಶಾ ರವಿ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಓದಿ : ಸಿಐಡಿಯಿಂದ ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ ತನಿಖೆ: ಬೊಮ್ಮಾಯಿ

ದಿಶಾ ರವಿ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯವು ಕಳೆದ ಶನಿವಾರ ನಡೆಸಿ, ಮಂಗಳವಾರಕ್ಕೆ(ಫೆ.23) ಕಾಯ್ದಿರಿಸಿತ್ತು.

ದಿಶಾ ರವಿ ಅವರು ಯಾವುದೇ ಪಿತೂರಿಯ ಭಾಗವಾಗಿಲ್ಲ. ಅವರು ಉದ್ದೇಶಗಳೆಲ್ಲವೂ ಪರಿಸರ ಮತ್ತು ರೈತರ ಒಳಿತಿಗಾಗಿ ಇವೆ. ಖಲಿಸ್ತಾನಿ ಚಳುವಳಿಗೂ, ಅವರಿಗೂ ಯಾವುದೇ ಸಂಬಂಧವಿಲ್ಲ’ ಎಂದು ದಿಶಾ ಪರ ವಕೀಲ ಸಿದ್ದಾರ್ಥ ಅಗರ್ ವಾಲ್ ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ವಾದ ಮಂಡಿಸಿದ್ದರು.

Advertisement

ಇದಕ್ಕೆ ಪ್ರತಿವಾದ ಮಂಡಿಸಿರುವ ದೆಹಲಿ ಪೊಲೀಸರ ಪರ ವಕೀಲರು, ‘ಭಾರತದ ಹೆಸರಿಗೆ ಮಸಿ ಬಳಿಯುವ ನಿಟ್ಟಿನಲ್ಲಿ ಹೆಣೆಯಲಾದ ಜಾಗತಿಕ ಪಿತೂರಿಯ ಭಾಗವಾಗಿ ದಿಶಾ ರವಿ ಕಾರ್ಯನಿರ್ವಹಿಸಿದ್ದಾರೆ. ಅವರಿಗೆ ಜಾಮೀನು ನೀಡುವುದು ಸಮಂಜಸವಲ್ಲ’ ಡಾಕ್ಯುಮೆಂಟ್ನ ಸೂತ್ರೀಕರಣ ಮತ್ತು ಪ್ರಸಾರದಲ್ಲಿ ದಿಶಾ ರವಿ ಪ್ರಮುಖ ಸಂಚು ಹೂಡಿದ್ದರು ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ ಮತ್ತು ಅವರು ಖಲಿಸ್ತಾನಿ ಪರ ಗುಂಪು ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ನೊಂದಿಗೆ “ಭಾರತದ ವಿರುದ್ಧ ಅಸಮಾಧಾನವನ್ನು ಹರಡಲು” ಸಹಕರಿಸಿದರು ಮತ್ತು ಥನ್ ಬರ್ಗ್ ಅವರೊಂದಿಗೆ ಡಾಕ್ಯುಮೆಂಟ್ ಹಂಚಿಕೊಂಡಿದ್ದಾರೆ. ಟೆಲಿಗ್ರಾಮ್ ಆ್ಯಪ್ ಮೂಲಕ ರವಿ ಟೂಲ್ ಕಿಟ್ ನನ್ನು ಥನ್ ಬರ್ಗ್ ಗೆ ಕಳುಹಿಸಿದ್ದಾರೆ ಮತ್ತು ಎಂದು ದೆಹಲಿ ಪೊಲೀಸರು ಹೇಳಿದ್ದರು.

ಇಂದು, ನ್ಯಾಯಾಲಯಕ್ಕೆ ಹಾಜರಾಗುವ ಮುನ್ನಾ, ಸಹ-ಆರೋಪಿಗಳಾದ ನಿಕಿತಾ ಜಾಕೋಬ್ ಮತ್ತು ಶಾಂತನು ಮುಲುಕ್ ಅವರನ್ನು ಭೇಟಿಯಾಗಲು ದಿಶಾ ರವಿ ಅವರನ್ನು ದೆಹಲಿ ಪೊಲೀಸ್ ಸೈಬರ್ ಸೆಲ್ ಕಚೇರಿಗೆ ಕರೆದೊಯ್ದಿದ್ದರು. ಜಾಕೋಬ್ ಮತ್ತು ಮುಲುಕ್ ಈ ಹಿಂದೆ ಬಾಂಬೆ ಹೈಕೋರ್ಟ್‌ ನಿಂದ ಟ್ರಾನ್ಸಿಟ್ ಜಾಮೀನು ಪಡೆದಿದ್ದು, ಬಂಧನದಿಂದ ರಕ್ಷಣೆ ನೀಡಿದ್ದರು.

ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುವ ‘ಟೂಲ್ಕಿಟ್’ಹಂಚಿಕೊಂಡ ಆರೋಪದ ಮೇಲೆ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರ ಬಂಧನವಾಗಿತ್ತು.

ಈಗ ಪಟಿಯಾಲ ಹೌಸ್ ನ್ಯಾಯಾಲಯ ದಿಶಾ ರವಿ ಅವರಿಗೆ ತಲಾ ಒಂದು ಲಕ್ಷ ಎರಡು ಶೂರಿಟಿಗಳೊಂದಿಗೆ ಜಾಮೀನು ನೀಡಿದೆ ಎಂದು ದಿಶಾ ಪರ ವಕೀಲ ಸಿದ್ದಾರ್ಥ ಅಗರ್ ವಾಲ್ ಮಾಧ್ಯಮಗಳಿಗೆ ತಿಳಿಸಿರುವುದು ವರದಿಯಾಗಿದೆ.

ಓದಿ : ದೈನಂದಿನ ವೆಚ್ಚ ಭರಿಸಲು ಪರದಾಟ! ­ಎಪಿಎಂಸಿ ಮುಚ್ಚುವಂತಹ ಪರಿಸ್ಥಿತಿ ನಿರ್ಮಾಣ

Advertisement

Udayavani is now on Telegram. Click here to join our channel and stay updated with the latest news.

Next