Advertisement

ಥಿಯೇಟರ್‌ನಲ್ಲಿ ‘ತೂತು ಮಡಿಕೆ’ದರ್ಶನ

03:32 PM Jul 08, 2022 | Team Udayavani |

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ತೂತು ಮಡಿಕೆ’ ಚಿತ್ರ ಇಂದು ತೆರೆ ಕಾಣುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ “ತೂತು ಮಡಿಕೆ’ ಸಿನಿಮಾ ಫ‌ಸ್ಟ್‌ಲುಕ್‌, ಟೀಸರ್‌, ಟ್ರೇಲರ್‌ ಮತ್ತು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದೇ ಖುಷಿಯಲ್ಲಿ ಚಿತ್ರತಂಡ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳನ್ನು ಸುತ್ತಿ ಒಂದು ಸುತ್ತಿನ ಪ್ರಚಾರ ಕಾರ್ಯವನ್ನೂ ನಡೆಸಿದೆ.

Advertisement

“ತೂತು ಮಡಿಕೆ’ ಸಿನಿಮಾದ ಮೂಲಕ ರಂಗಭೂಮಿ ಕಲಾವಿದ ಚಂದ್ರಕೀರ್ತಿ ಸ್ವತಂತ್ರ ನಿರ್ದೇಶಕರಾಗುವುದರ ಜೊತೆಗೆ ನಾಯಕನಾಗಿಯೂ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ. ಇನ್ನು ಸಿನಿಮಾ ಬಿಡುಗಡೆಗೆ ಮುನ್ನ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, “ತೂತು ಮಡಿಕೆ’ ಬಿಡುಗಡೆಯ ತಯಾರಿಗಳ ಬಗ್ಗೆ ಒಂದಷ್ಟು ಮಾಹಿತಿ ನೀಡಿತು.

ಮೊದಲಿಗೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಕಂ ನಾಯಕ ಚಂದ್ರಕೀರ್ತಿ, “ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಎರಡೂವರೆ ವರ್ಷದಿಂದ ಕಾದು ಚಿತ್ರ ರಿಲೀಸ್‌ ಮಾಡ್ತಿದೆ. ಜನ ಥಿಯೇಟರ್‌ನಲ್ಲಿ ಕುಳಿತು ಸಿನಿಮಾ ನೋಡ್ಬೇಕು ಅನ್ನೋದು ನಮ್ಮ ಇಡೀ ಚಿತ್ರತಂಡದ ಕನಸು. ಎಲ್ಲರಿಗೂ ಇಷ್ಟವಾಗುವಂಥ ಸಿನಿಮಾ ಮಾಡಿದ್ದೇವೆ ಎಂಬ ನಂಬಿಕೆಯಿದೆ. ಈಗಾಗಲೇ ಪ್ರತಿ ಜಿಲ್ಲೆಗಳಿಗೂ ಹೋಗಿ ಪ್ರಮೋಷನ್‌ ಮಾಡಿದ್ದೇವೆ’ ಎಂದರು.

“ತೂತು ಮಡಿಕೆ’ ಚಿತ್ರದಲ್ಲಿ ನಾಯಕ ಚಂದ್ರಕೀರ್ತಿ ಅವರಿಗೆ ಪಾವನಾ ಗೌಡ ನಾಯಕಿಯಾಗಿ ಜೋಡಿಯಾಗಿದ್ದಾರೆ. ಚಿತ್ರದಲ್ಲಿ ಟೀ ಅಂಗಡಿ ಇಟ್ಟುಕೊಂಡಿರುವ ಹುಡುಗಿಯ ಪಾತ್ರದಲ್ಲಿ ಪಾವನಾ ಕಾಣಿಸಿಕೊಂಡಿದ್ದಾರೆ. ಪ್ರಮೋದ್‌ ಶೆಟ್ಟಿ, ಉಗ್ರಂ ಮಂಜು, ಗಿರೀಶ್‌ ಶಿವಣ್ಣ ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು.  ಉಳಿದಂತೆ ಶಂಕರ್‌ ಅಶ್ವತ್‌, ಸಿತಾರಾ ನರೇಶ್‌ ಭಟ್‌ ಮೊದಲಾದವರು “ತೂತು ಮಡಿಕೆ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ನಿರ್ಮಾಪಕರಾದ ಮಧುಸೂದನ್‌ ಮತ್ತು ಶಿವಕುಮಾರ್‌ ಮಾತನಾಡಿ, “ಸಿನಿಮಾ ಬಿಡುಗಡೆಯ ಬಗ್ಗೆ ತುಂಬ ಉತ್ಸುಕರಾಗಿದ್ದು, “ಅಭಿಜಿತ್‌ ಎಂಟರ್‌ಪ್ರೈಸಸ್‌’ ಮೂಲಕ ರಾಜ್ಯಾದ್ಯಂತ ಸುಮಾರು 80ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಈಗಾಗಲೇ ಒಟಿಟಿಯಲ್ಲೂ ಸಿನಿಮಾ ಮಾರಾಟವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next