Advertisement

ಭರವಸೆ ಮೂಡಿಸಿದ ‘ತೂತು ಮಡಿಕೆ’ಟ್ರೇಲರ್‌

12:17 PM Jun 26, 2022 | Team Udayavani |

ಆರಂಭದಿಂದಲೂ ಸದ್ದು ಮಾಡುತ್ತಲೇ ಬರುತ್ತಿರುವ ಹೊಸಬರ “ತೂತು ಮಡಿಕೆ’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರ ಜುಲೈ 08ರಂದು ತೆರೆಕಾಣಲಿದೆ.

Advertisement

ಚಿತ್ರದ ಬಗ್ಗೆ ಮಾತನಾಡುವ ನಾಯಕ ನಟ ಕಂ ನಿರ್ದೇಶಕ ಚಂದ್ರ ಕೀರ್ತಿ, ಮೂರು ವರ್ಷದಿಂದ ಸಿನಿಮಾ ಮುಗಿಸಿ ರಿಲೀಸ್‌ ಗೆ ಎದುರು ನೋಡುತ್ತಿದ್ದೇವೆ. ಆಸೆಪಟ್ಟು ಸಿನಿಮಾರಂಗಕ್ಕೆ ಬಂದಿದ್ದು, ಹಲವು ಕಿರುಚಿತ್ರ, ನಾಟಕಗಳ ನಂತ್ರ ಒಂದೊಂದೇ ಅವಕಾಶ ಸಿಕ್ತಿದ್ದವು, ಆದ್ರೆ ಮಾಡಿದ ಸಿನಿಮಾಗಳು ರಿಲೀಸ್‌ ಆಗ್ತಿರಲಿಲ್ಲ. ನಮ್ಮ ಬಳಿ ಇರುವ ಸಣ್ಣ ಹಣಕಾಸಿನೊಂದಿಗೆ ಮೂಲಕ ಸಿನಿಮಾ ಶುರು ಮಾಡಿದೆವು. ಹೊಸ ನಿರ್ದೇಶಕನಿಗೆ ನಿರ್ಮಾಪಕರು ಸಿಗುವುದು ಕಷ್ಟದ ಕೆಲಸ. ಆದರೆ, ನಮಗೆ ನಿರ್ಮಾಪಕರೇ ನಮ್‌ ಆಫೀಸ್ ಗೆ ಬಂದು ಸಿನಿಮಾ ಕಥೆ ಕೇಳಿ ಇಷ್ಟಪಟ್ಟು ಸಿನಿಮಾ ಮಾಡಿದ್ದಾರೆ’ ಎಂದರು.

ಚಿತ್ರದಲ್ಲಿ ನಟಿಸಿರುವ ಪ್ರಮೋದ್‌ ಶೆಟ್ಟಿ ಮಾತನಾಡಿ, “ದುಡ್ಡು ಮಾಡಿದವ್ನು ಇನ್ನೂ ದುಡ್ಡು ಮಾಡ್ಬೇಕು. ದುಡ್ಡು ಇಲ್ಲದವನಿಗೆ ದುಡ್ಡು ಮಾಡಬೇಕು ಎಂಬ ಆಸೆ.. ಇಂತಹ ಅಂಶದೊಂದಿಗೆ ಈ ಸಿನಿಮಾ ಮೂಡಿಬಂದಿದೆ. ಚಿತ್ರ ತುಂಬಾ ಅದ್ಭುತವಾಗಿ ಮೂಡಿಬಂದಿದೆ. ಹೊಸಬರ ಜೊತೆ ಕೆಲಸ ಮಾಡುತ್ತಾ, ಹೊಸತನ ಕಲಿಯುತ್ತೇನೆ’ ಎಂದರು.

ಇದನ್ನೂ ಓದಿ:‘ಬಡ್ಡೀಸ್‌’ ಚಿತ್ರ ವಿಮರ್ಶೆ: ಸ್ನೇಹದ ನೆರಳಿನಲ್ಲಿ ಥ್ರಿಲ್ಲಿಂಗ್‌ ಸ್ಟೋರಿ

ಸ್ವಾರ್ಥ, ದುರಾಸೆ ಸುತ್ತಾ ಸಾಗುವ ಕಥೆಗೆ ಚಂದ್ರಕೀರ್ತಿ ಆಕ್ಷನ್‌ ಕಟ್‌ ಹೇಳುವುದರ ಜೊತೆಗೆ ನಾಯಕನಾಗಿ ನಟಿಸಿದ್ದಾರೆ. ನಾಯಕಿಯಾಗಿ ಗೊಂಬೆಗಳ ಲವ್‌ ಖ್ಯಾತಿಯ ಪಾವನಾ ಗೌಡ ಅಭಿನಯಿಸಿದ್ದು, ಉಳಿದಂತೆ ಪ್ರಮೋದ್‌ ಶೆಟ್ಟಿ, ಉಗ್ರಂ ಮಂಜು, ಗಿರೀಶ್‌ ಶಿವಣ್ಣ, ಶಂಕರ್‌ ಅಶ್ವತ್ಥ್, ಸಿತಾರಾ ನರೇಶ್‌ ಭಟ್‌ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

Advertisement

ತೂತುಮಡಿಕೆ ಸಿನಿಮಾಗೆ ಸರ್ವತಾ ಸಿನಿ ಗ್ಯಾರೇಜ್‌ ಬ್ಯಾನರ್‌ ನಡಿ ಮಧುಸೂಧನ್‌ ರಾವ್‌ ಹಾಗೂ ಶಿವಕುಮಾರ್‌ ಬಂಡವಾಳ ಹೂಡಿದ್ದು, ನವೀನ್‌ ಚಲ್ಲ ಛಾಯಾಗ್ರಹಣ, ಉಜ್ವಲ್‌ ಚಂದ್ರ ಸಂಕಲನ ಸಿನಿಮಾಕ್ಕಿದೆ.

Advertisement

Udayavani is now on Telegram. Click here to join our channel and stay updated with the latest news.

Next