Advertisement

“ಹೆಚ್ಚು ಅಂಕದ 10ವಿದ್ಯಾರ್ಥಿಗಳ ಉತ್ತರ ಪತ್ರಿಕೆ ವೆಬ್‌ಸೈಟ್‌ನಲ್ಲಿ’

09:03 PM Mar 01, 2020 | Sriram |

ಮಡಿಕೇರಿ: ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಹತ್ತು ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪೌಢಶಿಕ್ಷಣ ಸಚಿವ‌ ಎಸ್‌.ಸುರೇಶ್‌ ಕುಮಾರ್‌ ಅವರು ತಿಳಿಸಿದ್ದಾರೆ.

Advertisement

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿಕಸನ ಸಂಸ್ಥೆ ವತಿಯಿಂದ ನಾಪೋಕ್ಲುವಿನ ಕೊಡವ ಸಮಾಜದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೊಂದಿಗೆ ಸಚಿವರು ಶನಿವಾರ ಸಂವಾದ ನಡೆಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸುವುದು ಹೇಗೆ? ಹೆಚ್ಚಿನ ಅಂಕ ಪಡೆಯುವುದು, ಓದಿನ ಕಡೆ ಗಮನ ನೀಡುವುದು ಮತ್ತಿತರ ಬಗ್ಗೆ ಸಚಿವರು ಹಲವು ಸಲಹೆ ನೀಡಿದರು.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸುವುದು, ಭಯವಿದ್ದಲ್ಲಿ ಓದಿರುವುದು ಸಹ ಮರೆತು ಹೋಗುತ್ತದೆ. ಭಯ ಒಂದು ರೀತಿ ಶತ್ರು ಇದ್ದಂತೆ, ಆದ್ದರಿಂದ ಭಯವನ್ನು ಮನಸ್ಸಿನಿಂದ ತೆಗೆದುಹಾಕಿ ಎಂದು ಸಚಿವರು ಸಲಹೆ ಮಾಡಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಜೀವನದ ಕೊನೆಯ ಹಂತವಲ್ಲ. ಜೀವನದಲ್ಲಿ ಹಲವು ಪರೀಕ್ಷೆಗಳನ್ನು ನಿರಂತರವಾಗಿ ಎದುರಿಸಬೇಕಾಗುತ್ತದೆ. ಅದರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಒಂದು ಪರೀಕ್ಷೆಯಾಗಿದೆ. ಆದ್ದರಿಂದ ಓದಿನ ಕಡೆ ಹೆಚ್ಚಿನ ಗಮನ ಹರಿಸುವಂತಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ತಿಳಿಸಿದರು.

Advertisement

ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಹತ್ತು ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಸುರೇಶ್‌ ಕುಮಾರ್‌ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಎಷ್ಟು ಮಂದಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಭಯ ಇದೆ ಎಂದು ಸಚಿವರು ಪ್ರಶ್ನಿಸಿದರು. . ಪಠ್ಯ ಪುಸ್ತಕದಲ್ಲಿನ ವಿಷಯವನ್ನೇ ಪ್ರಶ್ನೆ ಕೇಳಲಾಗುತ್ತದೆ. ¿ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಿ.ವಿ.ಸ್ನೇಹ, ವಿಕಸನ ಸಂಸ್ಥೆಯ ಅಧ್ಯಕ್ಷ ಚೆಯ್ಯಂಡ ಸತ್ಯ, ಕೂಡಿಗೆ ಡಯಟ್‌ ಸಂಸ್ಥೆಯ ಪ್ರಾಂಶುಪಾಲಶ್ರೀಧರನ್‌, ಶಿಕ್ಷಣಾಧಿಕಾರಿಎಚ್‌.ಕೆ.ಪಾಂಡು, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಇತರರು ಉಪಸ್ಥಿತರಿದ್ದರು.

ವಿಕಸನ ಸಂಸ್ಥೆಯ ಸದಸ್ಯ ಕಿಶೋರ್‌ ರೈ ಕಾರ್ಯಕ್ರಮ ನಿರೂಪಿಸಿದರು. ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರಾದ ಮನುಮುತ್ತಪ್ಪ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ .ಗಾಯತ್ರಿ ವಂದಿಸಿದರು.

“ಫ‌ಲಿತಾಂಶ ಕಡಿಮೆ’
ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರಾದ ಮನುಮುತ್ತಪ್ಪ ಅವರು ಮಾತನಾಡಿ ನಾಪೋಕ್ಲು ಸರ್ಕಾರಿ ಶಾಲೆಯಲ್ಲಿ ಓದಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಆದರೆ ಇತ್ತೀಚೆಗೆ ಈ ಭಾಗದಲ್ಲಿ ಫ‌ಲಿತಾಂಶ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್‌.ಮಚ್ಚಾಡೋ ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿನ ಪರೀûಾ ಭಯ ಹೋಗಲಾಡಿಸಲು ಮತ್ತು ಧೈರ್ಯ ತುಂಬುವ ನಿಟ್ಟಿನಲ್ಲಿ ಸಂವಾದ ಏರ್ಪಡಿಸಲಾಗಿದೆ ಎಂದು ಅವರು ಹೇಳಿದರು.

ವಿಕಸನ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸ್ಪೂರ್ತಿ ಮತ್ತು ಪ್ರೇರಣೆ ನೀಡುವ ನಿಟ್ಟಿನಲ್ಲಿ ಖ್ಯಾತ ಕ್ರೀಡಾಪಟು ಅರ್ಜುನ್‌ ದೇವಯ್ಯ ಅವರಿಂದ ಮಾಹಿತಿ ನೀಡಲಾಗಿದೆ ಎಂದರು.

ಮನಸ್ಸು ಮಾಡಿದ್ದಲ್ಲಿ ಏನನ್ನಾದರೂ ಸಾಧಿಸಬಹುದು. ಆ ನಿಟ್ಟಿನಲ್ಲಿ ಯಾರೂ ಸಹ ಅನುತ್ತೀರ್ಣರಾಗಬಾರದು. ಓದಿನ ಕಡೆ ಗಮನಹರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದರೆ ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next