Advertisement

ಜೈಶ್ ಸಂಘಟನೆಯ ಪ್ರಮುಖ ಉಗ್ರ, ಪಾಕ್ ಪ್ರಜೆ ಖಾಲಿದ್ ಫಿನಿಶ್

02:52 PM Oct 09, 2017 | Team Udayavani |

ಶ್ರೀನಗರ್:ಪ್ರತಿ ದಿನ ಐದಾರು ಉಗ್ರರನ್ನು ನಮ್ಮ ಸೇನೆ ಹೊಡೆದುರುಳಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದ ಬೆನ್ನಲ್ಲೇ ಭದ್ರತಾ ಪಡೆಯ ಮಹತ್ವದ ಕಾರ್ಯಾಚರಣೆಯಲ್ಲಿ ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಖಾಲಿದ್ ಉತ್ತರ ಕಾಶ್ಮೀರದ ಲಾಡೂರಾ ಪ್ರದೇಶದಲ್ಲಿ ಎನ್ ಕೌಂಟರ್ ಗೆ ಬಲಿಯಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಜಮ್ಮು- ಕಾಶ್ಮೀರದ ಪೊಲೀಸ್ ಮಹಾನಿರ್ದೆಶಕ ಎಸ್ ಪಿ ವೈಡ್ ಈ ಬಗ್ಗೆ ಮಾಹಿತಿ ನೀಡಿದ್ದು, ಸೋಮವಾರ ಭದ್ರತಾ ಪಡೆಗಳ ಮಹತ್ವದ ಕಾರ್ಯಾಚರಣೆಯಲ್ಲಿ ಉತ್ತರ ಕಾಶ್ಮೀರದ ಭದ್ರತಾ ಪಡೆಯ ಶಿಬಿರಗಳ ಮೇಲೆ ನಡೆದ ದಾಳಿಯಲ್ಲಿ ಶಾಮೀಲಾಗಿದ್ದ ಹಾಗೂ ಪೊಲೀಸರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದ್ದ ಉಗ್ರನನ್ನು ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಿರುವುದಾಗಿ ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಕಾರ್ಯಾಚರಣೆ ಪಡೆ, ಸ್ಥಳೀಯ ಪೊಲೀಸರು, ಸಿಆರ್ ಪಿಎಫ್ ಮತ್ತು ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಪ್ರಜೆ, ಜೈಶ್ ಎ ಮೊಹಮ್ಮದ್ ಉಗ್ರ ಖಾಲಿದ್ ನನ್ನು ಹತ್ಯೆಗೈದಿರುವುದಾಗಿ ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next