Advertisement

ಬಾರಾಮುಲ್ಲಾದಲ್ಲಿ ಎಲ್‌ಇಟಿ ಉನ್ನತ ಕಮಾಂಡರ್ ಯೂಸುಫ್ ಕಾಂಟ್ರೂ ಹತ್ಯೆ

02:09 PM Apr 21, 2022 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಉನ್ನತ ಕಮಾಂಡರ್ ಯೂಸುಫ್ ಕಾಂಟ್ರೂ ಹತ್ಯೆಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಉತ್ತರ ಕಾಶ್ಮೀರದ ಬಾರಾಮುಲ್ಲಾದ ಮಾಲ್ವಾ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಅಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಉಗ್ರರು ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು, ಅವರು ಪ್ರತಿದಾಳಿ ನಡೆಸಿ ಹತ್ಯೆ ಗೈದಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಬಾರಾಮುಲ್ಲಾ ಎನ್‌ಕೌಂಟರ್‌ನಲ್ಲಿ ಎಲ್‌ಇಟಿಯ ಉನ್ನತ ಭಯೋತ್ಪಾದಕ ಕಮಾಂಡರ್, ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಯ ಹಲವಾರು ಹತ್ಯೆಗಳಲ್ಲಿ ಭಾಗಿಯಾಗಿದ್ದ ಯೂಸುಫ್ ಕಾಂಟ್ರೂ ನನ್ನು ಕೊಲ್ಲಲಾಗಿದೆ” ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.

“ಇತ್ತೀಚೆಗೆ ಬುದ್ಗಾಮ್ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಮತ್ತು ಅವರ ಸಹೋದರ, ಯೋಧ ಮತ್ತು ನಾಗರಿಕನ ಹತ್ಯೆಯಲ್ಲಿ ಕಾಂಟ್ರೂ ಕೂಡ ಭಾಗಿಯಾಗಿದ್ದಾನೆ” ಎಂದು ಐಜಿಪಿ ಹೇಳಿದರು, ಎಲ್ಇಟಿ ಕಮಾಂಡರ್ ಹತ್ಯೆಯು “ನಮಗೆ ದೊಡ್ಡ ಯಶಸ್ಸು” ಎಂದು ಹೇಳಿದರು.

ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next