Advertisement

ಕೋವಿಡ್ ಕಳವಳ –ಜು.15 : 3176 ಸೋಂಕು ಪ್ರಕರಣ ದಾಖಲು ; 1076 ಮಂದಿ ಚೇತರಿಕೆ ; 87 ಸಾವು

08:45 PM Jul 15, 2020 | Hari Prasad |

ಬೆಂಗಳೂರು: ಮಂಗಳವಾರ ಸಾಯಂಕಾಲದಿಂದ ಬುಧವಾರ ಸಾಯಂಕಾಲದವರೆಗಿನ ಕೋವಿಡ್ 19 ಪ್ರಕರಣಗಳ ವರದಿಯ ಪ್ರಕಾರ ರಾಜ್ಯದಲ್ಲಿ ಒಟ್ಟು 3176 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲಾಗಿವೆ.

Advertisement

ಒಂದೇ ದಿನ ರಾಜ್ಯದಲ್ಲಿ 1076 ಕೋವಿಡ್ 19 ಸೋಂಕಿತರು ಚೇತರಿಸಿಕೊಂಡಿರುವುದು ಒಂದು ಆಶಾದಾಯಕ ವಿಚಾರವಾಗಿದೆ. ಇಂದು ರಾಜ್ಯದಲ್ಲಿ ಕೋವಿಡ್ 19 ಸಂಬಂಧಿತ ಒಟ್ಟು 87 ಸಾವು ಸಂಭವಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಎರಡು ಸಾವಿರಕ್ಕೆ ಸನಿಹದಲ್ಲಿದೆ ಇಂದು ಇಲ್ಲಿ 1975 ಸೋಂಕಿತರು ಪತ್ತೆಯಾಗಿದ್ದಾರೆ. ಆ ಬಳಿಕದ ಸ್ಥಾನದಲ್ಲಿ ಧಾರವಾಡ (139), ಬಳ್ಳಾರಿ (136), ಮೈಸೂರು (99), ವಿಜಯಪುರ (80) ಹಾಗೂ ದಕ್ಷಿಣ ಕನ್ನಡ (76) ಜಿಲ್ಲೆಗಳಿವೆ.

ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 87 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಈ ಮಹಾಮಾರಿಗೆ ಬಲಿಯಾದವರ ಒಟ್ಟು ಸಂಖ್ಯೆ 928ಕ್ಕೆ ಏರಿಕೆ ಆಗಿದೆ.

ಇಂದು ರಾಜ್ಯಾದ್ಯಂತ ಒಟ್ಟು 1076 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 47253 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 18466 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 27853 ಇದೆ.

Advertisement

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 60 ಸೋಂಕಿತರು ಮೃತಪಟ್ಟಿದ್ದಾರೆ. ಇನ್ನುಳಿದಂತೆ, ಮೈಸೂರು ಜಿಲ್ಲೆಯಲ್ಲಿ 6 ಸೋಂಕಿತರು ಸಾವನ್ನಪ್ಪಿದ್ದರೆ, ಧಾರವಾಡ ಜಿಲ್ಲೆಯಲ್ಲಿ 5 ಸಾವು ಸಂಭವಿಸಿದೆ. ಉತ್ತರ ಕನ್ನಡ, ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ ಮೂರು ಸಾವು ಸಂಭವಿಸಿದೆ. ರಾಯಚೂರು ಜಿಲ್ಲೆಯಲ್ಲಿ ಇಬ್ಬರು ಕೋವಿಡ್ 19 ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ, ಮಂಡ್ಯ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೋವಿಡ್ 19 ಸೋಂಕು ಸಂಬಂಧಿ ತಲಾ ಒಂದೊಂದು ಸಾವು ಸಂಭವಿಸಿದೆ.

ಈ ಮೂಲಕ ರಾಜ್ಯದಲ್ಲಿ ಒಟ್ಟಾರೆಯಾಗಿ ಇದುವರೆಗೆ 928 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 06 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 597 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 1975 ಪಾಸಿಟಿವ್ ಪ್ರಕರಣ ಸೇರಿದಂತೆ, ಧಾರವಾಡ – 139, ಬಳ್ಳಾರಿ – 136, ಮೈಸೂರು – 99, ವಿಜಯಪುರ 80, ದಕ್ಷಿಣ ಕನ್ನಡ – 76, ಕಲಬುರಗಿ – 67, ಉಡುಪಿ – 52, ಯಾದಗಿರಿ – 49, ಉತ್ತರ ಕನ್ನಡ – 48, ಬೆಳಗಾವಿ – 41, ಗದಗ – 39, ಬೀದರ್ – 35, ದಾವಣಗೆರೆ – 35, ಬಾಗಲಕೋಟೆ – 34, ಚಿಕ್ಕಬಳ್ಳಾಪುರ – 32, ಮಂಡ್ಯ – 31, ಶಿವಮೊಗ್ಗ – 29, ರಾಯಚೂರು – 26, ಹಾಸನ – 25, ತುಮಕೂರು – 24, ಕೊಡಗು – 23, ಕೋಲಾರ – 15, ಕೊಪ್ಪಳ – 14, ಚಿಕ್ಕಮಗಳೂರು – 13, ಚಿತ್ರದುರ್ಗ – 12, ಬೆಂಗಳೂರು ಗ್ರಾಮಾಂತರ – 10 ಸೇರಿದಂತೆ ರಾಜ್ಯದ ಒಟ್ಟು 27 ಜಿಲ್ಲೆಗಳಲ್ಲಿ ಇಂದು ಎರಡಂಕೆಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next