Advertisement

Tourism: ಗಿರಿಶಿಖರಗಳ ಚಾರಣ ನಿಷೇಧ ರದ್ದು

01:46 AM Aug 18, 2024 | Team Udayavani |

ಮಂಗಳೂರು: ಮುಂಗಾರು ಹಿನ್ನೆಲೆಯಲ್ಲಿ ದ.ಕ.ಜಿಲ್ಲಾದ್ಯಂತ ವ್ಯಾಪಕ ಮಳೆಯಾದ ಕಾರಣ ಭೂಕುಸಿತ, ಗುಡ್ಡ ಕುಸಿತ, ಸಿಡಿಲು ಬಡಿತ, ಮರ ಬೀಳುವಂತಹ ದುರ್ಘ‌ಟನೆಗಳು ಸಂಭವಿಸುವ ಸಾಧ್ಯತೆಯಿದ್ದ ಕಾರಣ ಸಾರ್ವಜನಿಕರ ಹಿತಾಸಕ್ತಿಯನ್ನು ಗಮನಿಸಿ ಜಿಲ್ಲೆಯಲ್ಲಿ ಗಿರಿತಾಣ/ಶಿಖರಗಳ ಚಾರಣವನ್ನು (ಟ್ರೆಕ್ಕಿಂಗ್‌) ಮತ್ತು ಹೋಮ್‌ ಸ್ಟೇ, ರೆಸಾರ್ಟ್‌, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರೆಕ್ಕಿಂಗ್‌, ಸಾಹಸ ಚಟುವಟಿಕೆ ಮೊದಲಾದವುಗಳನ್ನು ನಿಷೇಧಿಸಲಾಗಿತ್ತು.

Advertisement

ಈ ಆದೇಶವನ್ನು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ನಿಬಂಧನೆಗೊಳಪಟ್ಟು ತತ್‌ಕ್ಷಣದಿಂದ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಮುಲ್ಲೆ$çಮುಗಿಲನ್‌ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next