Advertisement

ದಯವಿಟ್ಟು ಶಿವಮೊಗ್ಗಕ್ಕೆ ಬರಬೇಡಿ…! ಪ್ರವಾಸಿಗರಿಗೆ ಶಿವಮೊಗ್ಗ ಜನರ ಮನವಿ

10:19 AM Mar 17, 2020 | sudhir |

ಶಿವಮೊಗ್ಗ: ದಯವಿಟ್ಟು ಶಿವಮೊಗ್ಗಕ್ಕೆ ಬರಬೇಡಿ..! ರಾಜ್ಯ, ಹೊರ ರಾಜ್ಯದ ಪ್ರವಾಸಿಗರಿಗೆ ಶಿವಮೊಗ್ಗದ ಜನರ ಮನವಿ ಇದು.

Advertisement

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ನಿರ್ಬಂಧ ಹೇರಿದೆ. ಈ ನಡುವೆ ಬೆಂಗಳೂರು ಸೇರಿದಂತೆ ವಿವಿಧೆಡೆಯ ಪ್ರವಾಸಿಗರು ಶಿವಮೊಗ್ಗದತ್ತ ಮುಖ ಮಾಡುತ್ತಿದ್ದಾರೆ. ರಜೆ ಇರುವುದರಿಂದ ಪ್ರವಾಸಿ ತಾಣಗಳನ್ನು ಕಣ್ತುಂಬಿಕೊಳ್ಳಲು ಮುಂದಾಗಿದ್ದಾರೆ. ಹಾಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಟೂರಿಸ್ಟ್‌ಗಳೇ ಶಿವಮೊಗ್ಗಕ್ಕೆ ಬರಬೇಡಿ ಅನ್ನುವ ಮನವಿಗಳು ಕಾಣಸಿಗುತ್ತಿವೆ.

ಹುಲಿ, ಸಿಂಹಧಾಮ ಬಂದ್‌: ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಮುಖ ಪ್ರವಾಸಿ ತಾಣ ಹುಲಿ ಮತ್ತು ಸಿಂಹಧಾಮವನ್ನು ಬಂದ್‌ ಮಾಡಲಾಗಿದೆ. ಮಾ. 15 ರಿಂದ 23ರವರೆಗೆ ಹುಲಿ, ಸಿಂಹಧಾಮ ಬಂದ್‌ ಮಾಡಲಾಗುತ್ತಿದೆ ಎಂದು ಸಫಾರಿಯ ಕಾರ್ಯಕಾರಿ ನಿರ್ವಾಹಕ ಮುಕುಂದ್‌ ಚಂದ್ರ ತಿಳಿಸಿದ್ದಾರೆ.

ಶಾಲೆ- ಕಾಲೇಜುಗಳಿಗೆ ರಜೆ ಇರುವುದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಳ ಆಗಬಹುದು. ಹೊರ ಜಿಲ್ಲೆ, ರಾಜ್ಯದಿಂದಲು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಆದರೆ ರಾಜ್ಯ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದರೆ ಸಮಸ್ಯೆಯಾಗಲಿದೆ ಎಂದು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮವನ್ನು ಬಂದ್‌ ಮಾಡಲಾಗುತ್ತದೆ ಎಂದು ಮುಕುಂದ್‌ ಚಂದ್ರ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next