Advertisement

ಪ್ರವಾಸಿಗರ ಆಕರ್ಷಣೆಯ ಗುಡಿಬಂಡೆ ತಾಣಗಳು

04:05 PM Oct 05, 2020 | Suhan S |

ಗುಡಿಬಂಡೆ: ಜಿಲ್ಲೆಯ ಅತಿ ದೊಡ್ಡ ಕೆರೆಗಳಲ್ಲಿ ಒಂದಾದ ಗುಡಿಬಂಡೆ ಅಮಾನಿಬೈರಸಾಗರ ಕೆರೆಯು ಇತ್ತೀಚಿಗೆ ಬಿದ್ದ ಮಳೆಯಿಂದಸುಮಾರು 90 ಭಾಗ ತುಂಬಿದ್ದು, ಕೆರೆ ತುಂಬಿ ಹರಿಯಲು ಕೇವಲ 4 ಅಡಿಗಳು ಮಾತ್ರ ಬಾಕಿಯಿದ್ದು, ಕೆರೆ ನೋಡಲು ರಾಜ್ಯದ ಹಲವು ಜಿಲ್ಲೆಗಳಿಂದ ಪ್ರವಾಸಿಗಳು ಬರುತ್ತಿದ್ದಾರೆ.

Advertisement

ವಿಶಿಷ್ಟ ಶೈಲಿ: ಗುಡಿಬಂಡೆ ಭೈರಸಾಗರ ಕೆರೆ ಭಾರತದ ಭೂಪಟ ಹೋಲುವ ರೀತಿ ಹಾಗೂ ಸಂಜೆ ಸೂರ್ಯಸ್ತದ ದೃಶ್ಯ ನೋಡಲು ನೂರಾರು ಪ್ರವಾಸಿಗರು ಬರುತ್ತಿದ್ದಾರೆ. ಸುತ್ತಲೂ ಹಸಿರ ಮಧ್ಯೆ ಇರುವ ವಿಶಾಲವಾದ ನೀರಿನ ಸಾಗರ, ಏರಿ ಮೇಲೆ ಸಾಗಿದರೆ ಸಾಗರದಂತೆಕಾಣುವಕೆರೆ ಎಂಥವರಿಗೂ ಮೈಜುಮ್ಮೆನ್ನುವ ಅನುಭವ ಆಗುತ್ತದೆ. ಅಮಾನಿಬೈ ರಸಾಗರ ಕೆರೆ ಎತ್ತರಪ್ರ ದೇಶದಿಂದ ನೋಡಿದರೆ ಭಾರತದ ಭೂಪಟದಂತೆ ಗೋಚರಿಸುವುದು ಬಹು ವಿಶಿಷ್ಟ ಶೈಲಿಯಲ್ಲಿ ಕೆರೆ ಕಟ್ಟೆಯನ್ನು ನಿರ್ಮಾಣ ಮಾಡಿರುವುದಕ್ಕೆ ಸಾಕ್ಷಿಯಾಗಿದೆ.

400 ವರ್ಷ ಇತಿಹಾಸ: ಸುಮಾರು 400 ವರ್ಷಗಳ ಹಿಂದೆ ಈ ಪ್ರದೇಶವನ್ನಾಳಿದ ಬೈರೇಗೌಡ ಸಾಮಾಜಿಕ ಹಿತ ಬಯಸುತ್ತಿದ್ದ ಕ್ರಾಂತಿಕಾರಿ ಮನೋಭಾವ ಹೊಂದಿದ್ದ ಪಾಳೇಗಾರ ಎಂಬುದಕ್ಕೆ ಆತ ನಿರ್ಮಿಸಿರುವ ಕೋಟೆ ಕೊತ್ತಲ, ಕೆರೆ ಸೇರಿದಂತೆ ಹಲವಾರುಸ್ಮಾರಕಗಳು ಇಲ್ಲಿ ಕಂಡುಬರುತ್ತವೆ. ಶನಿವಾರ ಮತ್ತು ಭಾನುವಾರ ನೂರಾರು ಪ್ರವಾಸಿಗಳು ಸುರಸದ್ಮಗಿರಿ ಬೆಟ್ಟವನ್ನು ಹತ್ತಿ ವೀಕ್ಷಣೆ ಮಾಡುತ್ತಾರೆ.

ರಜೆ ದಿನಗಳಲ್ಲಿ ಪ್ರವಾಸಿಗರ ದಂಡು: ಗುಡಿಬಂಡೆ ಅಮಾನಿಬೈರ ಸಾಗರ ಮತ್ತು ಸುರಸದ್ಮಗಿರಿ‌ ಬೆಟ್ಟಕ್ಕೆ ರಜೆ ದಿನಗಳಲ್ಲಿ ಚಾರಣಕ್ಕೆ ಆಗಮಿಸುವವರು, ಸುತ್ತಮುತ್ತ ಪಂಚಗಿರಿಗಳನ್ನು ಸುತ್ತಲು ಬರುವ ಪ್ರವಾಸಿಗರು ಬೈರಸಾಗರ ಕೆರೆಗೂ ಭೇಟಿ ನೀಡಿ ಪ್ರಕೃತಿ ಸೌಂದರ್ಯ ಅನುಭವಿಸುತ್ತಿದ್ದಾರೆ. ಹೆಚ್ಚಾಗಿ ಇಲ್ಲಿಗೆ ಬೆಂಗಳೂರು ನಗರ, ಅನಂತಪುರ, ತುಮಕೂರು ಸೇರಿದಂತೆ ಹಲವೆಡೆಯಿಂದಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ.

ಪ್ರವಾಸಿಗರ ಸಂಖ್ಯೆ ಹೆಚ್ಚಳ: ಇತ್ತೀಚೆಗೆ ಗುಡಿಬಂಡೆ ಪಟ್ಟಣದ ಯುವಕರು ಮತ್ತು ಈಗಾಗಲೇ ಪ್ರಕೃತಿ ಸೊಬಗನ್ನು ಆನಂದಿಸಿರುವ ಪ್ರವಾಸಿಗರು, ಡ್ರೋಣ್‌ ಕ್ಯಾಮೆರಾದ ಮೂಲಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಬಳಿಕ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆಗೆ ಬರುತ್ತಿದ್ದಾರೆ. ಪ್ರವಾಸಿ ತಾಣಗಳನ್ನಾಗಿ ಮಾಡುವಲ್ಲಿ ವಿಫಲ:ಪ್ರತಿ ದಿನ ಇಲ್ಲಿನ ಪ್ರವಾಸಿ ತಾಣಗಳನ್ನುನೋಡಲು ನೂರಾರು ಪ್ರವಾಸಿಗರು ಇಲ್ಲಿಗೆಬರುತ್ತಾರೆ.ಆದರೆಇದನ್ನುಪ್ರವಾಸಿ ತಾಣವನ್ನಾಗಿ ಮಾಡಿ ಪ್ರವಾಸಿಗರಿಗೆ ಮೂಲ ಸೌಲಭ್ಯಗಳನ್ನು ನೀಡುವಲ್ಲಿ ಸ್ಥಳಿಯ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ.

Advertisement

ಮೂಲಸೌಕರ್ಯ ಕಲ್ಪಿಸಿದರೆ ಉತ್ತಮ :  ಬೆಂಗಳೂರಿಗೆ ಹತ್ತಿರದಲ್ಲಿ ಇರುವ ಗುಡಿಬಂಡೆಯಲ್ಲಿ ಅನೇಕ ಪ್ರವಾಸಿ ತಾಣಗಳಿವೆ ಎಂದು ನಮಗೆ ಗೊತ್ತೆ ಇರಲಿಲ್ಲ.ಸಾಮಾಜಿಕಜಾಲತಾಣದಲ್ಲಿಅಮಾನಿಬೈರಸಾಗರ ಕೆರೆಯ ಮತ್ತು ಗುಡಿಬಂಡೆ ಸುರಸದ್ಮಗಿರಿ ಬೆಟ್ಟದ ಫೋಟೋ ಮತ್ತು ವಿಡಿಯೋ ಹಾಕಿದ್ದರು. ಅದನ್ನು ನೋಡಿದ ಬಳಿಕ ನೋಡಲೇ ಬೇಕೆನಿಸಿ ನಾನು ಮತ್ತು ಕುಟುಂಬಸ್ಥರು ಆಗಮಿಸಿ ಸಂತೋಷದಿಂದ ಕಳೆದಿದ್ದೇವೆ. ಆದರೆ ಕೆಲ ಮೂಲ ಸೌಕರ್ಯಗಳ ಕೊರತೆಯಿದ್ದು, ಸರಿಪಡಿಸಿದರೆ ಉತ್ತಮವಾಗಿರುತ್ತದೆ ಎಂದು ಬೆಂಗಳೂರು ನಿವಾಸಿ ಸಾಗರ್‌ ಎಂಬುವವರು ಪ್ರತಿಕ್ರಿಯಿಸಿದರು.

ಬೋಟಿಂಗ್‌ ಮಾಡುವುದಾಗಿ ಹೇಳಿ 5 ವರ್ಷ ಕಳೆದವು :  ಗುಡಿಬಂಡೆ ಅಮಾನಿಬೈರಸಾಗರ ಕೆರೆ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿಪಡಿಸುತ್ತೇವೆಂದು ಹೇಳಿ ಸುಮಾರು5 ವರ್ಷಗಳೇ ಕಳೆದಿವೆ. ಆದರೆ ಇಲ್ಲಿಯವರೆಗೂ ಅಭಿವೃದ್ಧಿಪಡಿಸುವಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ವಿಫಲರಾಗಿದ್ದಾರೆ.

ಪೊಲೀಸ್‌ ಬಂದೋಬಸ್ತ್ :  ಕೆರೆಗೆ ಹೆಚ್ಚು ನೀರು ಬಂದು ಇನ್ನೇನು ಹರಿಯುವ ಮಟ್ಟದಲ್ಲಿರುವುದರಿಂದ ಇಲ್ಲಿಗೆ ಅನೇಕ ಪ್ರವಾಸಿಗರು ಮತ್ತು ಮಕ್ಕಳು ಬರುತ್ತಾರೆಂದು ಮುನ್ನೆಚ್ಚರಿಕೆ ಕ್ರಮವಾಗಿ ಅಮಾನಿಬೈರಸಾಗರ ಕೆರೆ ಕಟ್ಟೆಗೆ ಪೊಲೀಸರನ್ನು ನಿಯೋಜನ ಮಾಡಿ ಸೂಕ್ತ ಬಂದೋಬಸ್ತ್ ನೀಡಲಾಗುತ್ತಿದೆ.

 

ವೆಂಕಟೇಶ್‌ ಎನ್‌.ವಿ

Advertisement

Udayavani is now on Telegram. Click here to join our channel and stay updated with the latest news.

Next