Advertisement

ನಿರ್ವಹಣೆ ಇಲ್ಲದ ಪ್ರವಾಸಿ ಮಂದಿರ

02:06 PM Jul 27, 2019 | Suhan S |

ಕನಕಗಿರಿ: ಪಟ್ಟಣದಲ್ಲಿ ಇರುವ ಪ್ರವಾಸಿ ಮಂದಿರ ನಿರ್ವಹಣೆ ಇಲ್ಲದೇ ಹಾಳಾಗುವ ಹಂತಕ್ಕೆ ತಲುಪಿದೆ.

Advertisement

ನಿಜಾಮರ ಕಾಲದಲ್ಲಿ ನಿರ್ಮಿಸಿರುವ ಪ್ರವಾಸಿ ಮಂದಿರದಲ್ಲಿ ಇರುವ ಶೌಚಾಲಯವನ್ನು ಅಧಿಕಾರಿಗಳು ದುರಸ್ತಿ ಮಾಡದೇ ಇರುವುದರಿಂದ ಪ್ರವಾಸಿ ಮಂದಿರಕ್ಕೆ ವಿಶ್ರಾಂತಿಗಾಗಿ ಬರುವ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ಜನ ಪತ್ರಿನಿಧಿಗಳಿಗೆ ದುರ್ನಾತ ಬೀರುತ್ತಿದೆ. ಸುಮಾರು ನಾಲ್ಕು ತಿಂಗಳಿಂದ ಶೌಚಾಲಯನ್ನು ದುರಸ್ತಿಗೊಳಿಲ್ಲ. ಪ್ರವಾಸಿ ಮಂದಿರದ ನಿರ್ವಹಣೆ ಹೊತ್ತ ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ರಾಜಣ್ಣನವರು ಪ್ರವಾಸಿ ಮಂದಿರಕ್ಕೆ ಭೇಟಿ ನೀಡದೇ ಗಂಗಾವತಿಯಲ್ಲಿ ಕಾಲ ಹರಣ ಮಾಡುತ್ತಿದ್ದಾರೆ. ಪ್ರವಾಸಿ ಮಂದಿರದ ನಿರ್ವಹಣೆ ಹೆಸರಿನಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂ. ಹಣವನ್ನು ಎತ್ತುವಳಿ ಮಾಡುತ್ತಿದ್ದಾರೆ. ಇನ್ನು ಪ್ರವಾಸಿ ಮಂದಿರದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೂ ಕೂಡ ಸುಮಾರು 4 ತಿಂಗಳಿಂದ ವೇತನವನ್ನು ನೀಡಿಲ್ಲ. ಕೂಡಲೇ ಅಭಿಯಂತರರ ವಿರುದ್ಧ ಮೇಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next