Advertisement

ಡೋಣಿ ನದಿಯಲ್ಲಿ ಕೊಚ್ಚಿಹೋದ ಟ್ರ್ಯಾಕ್ಟರ್: ಸ್ಥಳೀಯರಿಂದ ರಕ್ಷಣೆ

01:24 PM Jul 21, 2021 | Team Udayavani |

ವಿಜಯಪುರ: ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಕಾರಣ ತುಂಬಿ ಹರಿಯುತ್ತಿರುವ ಡೋಣಿ ನದಿಯ ಸೇತುವೆ ಮೇಲೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಕೊಚ್ವಿಹೋದ ಘಟನೆ ತಾಳಿಕೋಟೆ ಬಳಿ ಸಂಭವಿಸಿದೆ.

Advertisement

ತಾಳಿಕೋಟೆ ತಾಲೂಕಿನ ಹಡಗಿನಾಳ ಗ್ರಾಮದ ಬಳಿ‌ ಹರಿಯುವ ಡೋಣಿ ನದಿ ಪ್ರವಾಹ ಸೃಷ್ಟಿಸಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗೆ ನೆಲ ಮಟ್ಟದಲ್ಲಿ ನಿರ್ಮಿಸಿರುವ ಸೇತುವೆ ಮೇಲೆ ಸಂಚರಿಸುತ್ತಿದ್ದ ಟ್ರ್ಯಾಕ್ಟರ್ ನದಿಯ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕೂಡಲೇ ಟ್ರ್ಯಾಕ್ಟರ್ ನಲ್ಲಿದ್ದವರು ತಕ್ಷಣ ಈಜಿ ದಡ ಸೇರಿದ್ದು, ಯಾವುದೇ ಜೀವ ಅಪಾಯ ಸಂಭವಿಸಿಲ್ಲ.

ಇದನ್ನೂ ಓದಿ:ಎರಡನೇ ವರ್ಷದ ಸಂಭ್ರಮದ ಬಿಎಸ್ ವೈ ಭೋಜನ ಕೂಟ ಮುಂದೂಡಿಕೆ!

ಗುಂಡಕಾನಾಳ ಗ್ರಾಮದ ಮಧುಗೌಡ ಪಾಟೀಲ ಅವರಿಗೆ ಸೇರಿದ್ದು, ತಾಳಿಕೋಟಿ ಪಟ್ಟಣದಿಂದ ಮೂಕಿಹಾಳ ಗ್ರಾಮಕ್ಕೆ ಟ್ರ್ಯಾಕ್ಟರ್ ಹೊರಟಿತ್ತು. ನದಿ ನೀರು‌ ಸೇತುವೆ ಮೇಲೆ ಪ್ರವಾಹದ ನೀರು ಹರಿಯುತ್ತಿದ್ದರೂ ಚಾಲಕ ಪ್ರವಾಹ ಲೆಕ್ಕಿಸದೇ ನದಿ ದಾಟಲು ಪ್ರಯತ್ನಿಸಿದಾಗ ಈ ಘಟನೆ ಸಂಭವಿಸಿದೆ.

ವಿಷಯ ತಿಳಿಯುತ್ತಲೇ ಸ್ಥಳೀಯರು ಜೆಸಿಬಿ ಬಳಸಿ ಟ್ರ್ಯಾಕ್ಟರ್ ಮೇಲೆತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next