Advertisement

ಅಂಗಡಿ ಬಳಿ ಟೀ ಕುಡಿಯುತ್ತಿದ್ದವರ ಮೇಲೆ ಹರಿದ ಟ್ರ್ಯಾಕ್ಟರ್: ನಾಲ್ವರಿಗೆ ಗಂಭೀರ ಗಾಯ

09:06 AM Dec 04, 2021 | Team Udayavani |

ಕುಣಿಗಲ್ (ತುಮಕೂರು): ಅಂಗಡಿ ಬಳಿ ಟೀ ಕುಡಿಯುತ್ತಿದ್ದವರ ಮೇಲೆ ಟ್ರ್ಯಾಕ್ಟರ್ ಹರಿದು ನಾಲ್ಕು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಕೆ.ಹೊಸಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ನಡೆದಿದೆ

Advertisement

ಕೆ.ಹೊಸಹಳ್ಳಿ ಗ್ರಾಮದ  ಆರೀಪ್ ಉಲ್ಲಾ (60 ವ), ನಂಜಪ್ಪ (65 ವ), ಚಲುವರಾಜು (60 ವ), ಪವನ್ ಗೌಡ (21 ವ) ತೀವ್ರವಾಗಿ ಗಾಯಗೊಂಡ ವ್ಯಕ್ತಿಗಳು.

ಕೆ ಹೊಸಹಳ್ಳಿ ಗ್ರಾಮ ಟೀ ಅಂಗಡಿಯೊಂದರ ಬಳಿ ಟೀ ಕುಡಿಯುತ್ತಿದ್ದ ವೇಳೆ ಟ್ರ್ಯಾಕ್ಟರೊಂದು ಚಾಲಕನ ನಿಯಂತ್ರಣ ತಪ್ಪಿ ಟೀ ಕುಡಿಯುತ್ತಿದ್ದವರ ಮೇಲೆ ಹರಿದು ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ: ಜವರಾಯನಾದ ಗ್ಯಾಸ್ ಟ್ಯಾಂಕರ್; ಪಂಚರ್ ಹಾಕುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು!

ಅಪಘಾತದಲ್ಲಿ ಆರೀಪ್ ಉಲ್ಲಾ ಎಂಬ ವ್ಯಕ್ತಿಯ ಕಾಲು ತುಂಡಾಗಿದ್ದು, ಚಲುವರಾಜು ಅವರ ಕೈ ಮುರಿದಿದೆ. ಉಳಿದ ಇಬ್ಬರಿಗೆ ಗಾಯವಾಗಿದೆ. ಪ್ರಥಮ ಚಿಕಿತ್ಸೆಯನ್ನು ಕುಣಿಗಲ್ ಪಟ್ಟಣದ ಎಂ.ಎಂ ಆಸ್ಪತ್ರೆಯಲ್ಲಿ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next