Advertisement

ಕೃಷಿ ಮಸೂದೆಗೆ ವಿರೋಧ: ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

10:16 AM Sep 28, 2020 | Nagendra Trasi |

ನವದೆಹಲಿ: ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ವಿರೋಧಿಸಿ ಸೋಮವಾರ ನಡೆಸುತ್ತಿರುವ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

Advertisement

ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸಿರುವುದಾಗಿ ವರದಿ ತಿಳಿಸಿದೆ. ರೈತರ ಹಾಗೂ ವಿಪಕ್ಷಗಳ ವಿರೋಧದ ನಡುವೆಯೇ ಸಂಸತ್ ನಲ್ಲಿ ಅಂಗೀಕಾರವಾಗಿರುವ ಕೃಷಿ ಸಂಬಂಧಿ ಮೂರು ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ಅಂಕಿತ ಹಾಕಿದ್ದಾರೆ.

ದೆಹಲಿಯ ಸೆಂಟ್ರಲ್ ಪ್ರದೇಶದಲ್ಲಿ ಬೆಳಗ್ಗೆ 15ರಿಂದ 20 ಮಂದಿ ಗುಂಪುಗೂಡಿದ್ದು, ಹಳೆಯ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿದ್ದರು. ಪೊಲೀಸರ ಹೇಳಿಕೆ ಪ್ರಕಾರ, ಪ್ರತಿಭಟನಾಕಾರರು ಕಾಂಗ್ರೆಸ್ ಪರ ಘೋಷಣೆ ಕೂಗುತ್ತಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಂದ್: ಮಂಗಳೂರಿನಲ್ಲಿ‌ ನೀರಸ ಪ್ರತಿಕ್ರಿಯೆ, ಬಸ್ ಸಂಚಾರ ಆರಂಭ

ಕೃಷಿ ಮಸೂದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಮುಖ್ಯವಾಗಿ ಪಂಜಾಬ್ ಮತ್ತು ಹರ್ಯಾಣದಲ್ಲಿ ತೀವ್ರ ವಿರೋಧ, ಪ್ರತಿಭಟನೆ ವ್ಯಕ್ತವಾಗಿದೆ.

Advertisement

ಕರ್ನಾಟಕದಲ್ಲಿಯೂ ರಾಜ್ಯ ಬಂದ್ ಗೆ ರೈತ ಸಂಘ ಸೇರಿದಂತೆ ಹಲವಾರು ಸಂಘಟನೆಗಳು ಕರೆ ನೀಡಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದರು. ರಾಜ್ಯದಲ್ಲಿ ಜನಜೀವನಕ್ಕೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸುವಂತೆ ತಿಳಿಸಿದ್ದರು.

ಇದನ್ನೂ ಓದಿ: ರೈತರ ಕರೆಗಿಂದು ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಬೆಂಗಳೂರಿನಲ್ಲಿ ರೈಲು ತಡೆಯತ್ನ

Advertisement

Udayavani is now on Telegram. Click here to join our channel and stay updated with the latest news.

Next