Advertisement

ಕಮಲನಗರದಲ್ಲಿ ಸಚಿವರ ಸಂಚಾರ: ಧನ ಸಹಾಯ

01:32 PM Apr 28, 2022 | Team Udayavani |

ಬೀದರ: ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರು ಕಮಲನಗರದಲ್ಲಿ ಸಂಚಾರದ ವೇಳೆ ಸಂಕಷ್ಟದಲ್ಲಿರುವ ಬಡ ಜನತೆಯ ಮನೆಗಳಿಗೆ ಭೇಟಿ ನೀಡಿ ವೈಯಕ್ತಿಕ ಧನ ಸಹಾಯ ಮಾಡಿದರು.

Advertisement

ಕ್ಯಾನ್ಸರ್‌ ರೋಗದಿಂದ ಬಳಲುತ್ತಿರುವ ಸಂಗೀತಾ ಸುರೇಶ ಅವರ ಮನೆಗೆ ಭೇಟಿ ನೀಡಿ, ಆಸ್ಪತ್ರೆಯ ಖರ್ಚಿಗಾಗಿ ಧನ ಸಹಾಯ ಮಾಡಿದರು. ಕೆಲವು ದಿನಗಳ ಹಿಂದೆ ಆತ್ಮಹತ್ಯೆಗೊಳಗಾದ ದಿ| ಯುವರಾಜ ಮುಳೆ ಅವರ ಕುಟುಂಬವು ತೀವ್ರ ಸಂಕಷ್ಟದಲ್ಲಿದೆ ಎನ್ನುವುದು ತಿಳಿಯುತ್ತಿದ್ದಂತೆ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರಲ್ಲದೇ ವಯಕ್ತಿಕ ಧನ ಸಹಾಯ ನೀಡಿದರು.

ಇದೇ ವೇಳೆ ಸಾಮಾಜಿಕ ಕಾರ್ಯಕರ್ತ ವೈಜಿನಾಥ ವಡ್ಡೆ ಅವರು ಕಾಲು ಮುರಿತದಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಕಾರ್ಯಕರ್ತರು ಮಾಹಿತಿ ನೀಡಿದಾಗ ತಕ್ಷಣ ಅವರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಏನಾದರೂ ಸಮಸ್ಯೆಯಿದ್ದಲ್ಲಿ ನನ್ನನ್ನು ನೇರವಾಗಿ ಸಂಪರ್ಕಿಸಿ. ಯಾವುದೇ ಕಾರಣಕ್ಕೂ ಆತಂಕ ಪಡಬೇಡಿ ಎಂದು ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಗ್ರಾಪಂ ಅಧ್ಯಕ್ಷ ಶಿವು ಜುಲೆ, ತಾಪಂ ಮಾಜಿ ಅಧ್ಯಕ್ಷ ಗಿರೀಶ ಒಡೆಯರ್‌, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಬಂಟಿ ರಾಂಪೂರೆ, ಮುಖಂಡರಾದ ಬಸವರಾಜ ಪಾಟೀಲ, ಶಿವಾನಂದ ವಡ್ಡೆ, ನಾಗೇಶ ಪತ್ರೆ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next