Advertisement

ವಿರಾಜಪೇಟೆಯಲ್ಲಿ ವಾಹನಗಳ ಸಂಚಾರ ಮಾರ್ಗ ಬದಲು

07:58 PM Sep 09, 2019 | Sriram |

ಮಡಿಕೇರಿ :ವಿರಾಜಪೇಟೆ ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ಗಣೇಶ ವಿಗ್ರಹ ವಿಸರ್ಜನಾ ಮೆರವಣಿಗೆಯ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಸೆ.12 ರ ಸಂಜೆ 5 ಗಂಟೆಯಿಂದ ಸೆ.13 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ಪಟ್ಟಣದಲ್ಲಿ ವಾಹನಗಳ ಸಂಚಾರವನ್ನು ಬದಲಿಸಿ ಪ್ರಭಾರ ಜಿಲ್ಲಾಧಿಕಾರಿ ಹಾಗು ಜಿಲ್ಲಾ ದಂಡಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.

Advertisement

ತಾತ್ಕಾಲಿಕ ಮಾರ್ಗದ ವಿವರ
ಪೆರುಂಬಾಡಿ ಕಡೆಯಿಂದ ವಿರಾಜಪೇಟೆ ನಗರಕ್ಕೆ ಉತ್ಸವ ವೀಕ್ಷಣೆಗೆ ಬರುವ ವಾಹನಗಳನ್ನು ವಿರಾಜಪೇಟೆ ತಾಲೂಕು ತಹಶೀಲ್ದಾರ್‌ರವರ ಕಚೇರಿಯ ಮುಂಭಾಗದಿಂದ ಆರ್ಜಿ ಕಡೆಗೆ ಹೋಗುವ ರಸ್ತೆಯ ಎಡಭಾಗದಲ್ಲಿ ಬದಿಯಲ್ಲಿ ವಾಹನ ನಿಲ್ಲಿಸುವುದು.

ಕೇರಳದ ಮಾಕುಟ್ಟ ಮಾರ್ಗವಾಗಿ ಗೋಣಿಕೂಪ್ಪದ ಕಡೆ ಅಥವಾ ಸಿದ್ದಾಪುರದ ಕಡೆಗಳಿಗೆ ಹೋಗುವ ವಾಹನಗಳಿಗೆ ಪೆರುಂಬಾಡಿ ಚೆಕ್‌ ಪೋಸ್ಟ್‌ ಬಾಳುಗೋಡು ಬಿಟ್ಟಂಗಾಲ ಜಂಕ್ಷನ್‌ ಕೈಕೇರಿ ಜಂಕ್ಷನ್‌ ಸಿ.ಎಂ.ಪೂಣಚ್ಚನವರ ಮನೆಯ ರಸ್ತೆ ಜಂಕ್ಷನ್‌ ಮಾರ್ಗವಾಗಿ ಪಾಲಿಬೆಟ್ಟ ಸಿದ್ದಾಪುರಕ್ಕೆ ಹೋಗುವುದು.

ಅದೇ ರೀತಿ ಸಿದ್ದಾಪುರ ಕಡೆಯಿಂದ ಕೇರಳದ ಕಡೆ ಹೋಗುವ ವಾಹನಗಳು ಕೈಕೇರಿ ಬಿಟ್ಟಂಗಾಲ ಬಾಳುಗೋಡು ಪೆರುಂಬಾಡಿ ಮಾರ್ಗವಾಗಿ ಕೇರಳದ ಕಡೆ ಹೋಗುವುದು.

ಮಡಿಕೇರಿಯಿಂದ ಕೇರಳದ ಕಡೆ ಹೋಗುವ ವಾಹನಗಳು ಸಿದ್ದಾಪುರ ಪಾಲಿಬೆಟ್ಟ ಕೈಕೇರಿ ಬಿಟ್ಟಂಗಾಲ ಬಾಳುಗೋಡು ಪೆರುಂಬಾಡಿ ಮಾಕುಟ್ಟ ಮಾರ್ಗವಾಗಿ ತೆರಳುವುದು.

Advertisement

ಮಡಿಕೇರಿ ಕಡೆಯಿಂದ ಮೈಸೂರು ಬೆಂಗಳೂರಿಗೆ ಹೋಗುವ ವಾಹನಗಳು ಸಿದ್ದಾಪುರ ಮಾರ್ಗವಾಗಿ ಗೋಣೆಕೊಪ್ಪ ಮೈಸೂರು, ಬೆಂಗಳೂರಿಗೆ ಹೋಗುವುದು.

ಸಿದ್ದಾಪುರ ಕಡೆಯಿಂದ ಮೆರವಣಿಗೆ ನೋಡಲು ವಿರಾಜಪೇಟೆಗೆ ಬರುವ ವಾಹನಗಳು ಮಗ್ಗುಲ ಜಂಕ್ಷನ್‌ (ಡೆಂಟಲ್‌ ಕಾಲೇಜ್‌ ಜಂಕ್ಷನ್‌) ಮತ್ತು ರವಿರಾಜ್‌ ಗ್ಯಾಸ್‌ ಏಜೆನ್ಸಿ ಕಚೇರಿಯಿಂದ ಐಮಂಗಲ ಕಡೆಗೆ ಹೋಗುವ ರಸ್ತೆಯ ಎಡಬದಿಯಲ್ಲಿ ನಿಲ್ಲಿಸತಕ್ಕದ್ದು.

ಗೋಣಿಕೂಪ್ಪ ಕಡೆಯಿಂದ ಮೆರವಣಿಗೆ ನೋಡಲು ಬರುವಂತಹ ವಾಹನಗಳನ್ನು ಪಂಜರುಪೇಟೆಯ ಸವೊದಯ ಕಾಲೇಜಿನ ಬಳಿಯಿಂದ ಕಾವೇರಿ ಕಾಲೇಜು ಕಡೆಗೆ ಎಡಬದಿಯಲ್ಲಿ ಮಾತ್ರ ನಿಲುಗಡೆ ಮಾಡುವುದು.

ಬೇಟೋಳಿ, ಗುಂಡಿಗೆರೆ, ಚಿಟ್ಟಡೆ ಕಡೆಯಿಂದ ಮಹಿಳಾ ಸಮಾಜ ಮಾರ್ಗವಾಗಿ ಮೆರವಣಿಗೆ ನೋಡಲು ಬರುವಂತಹ ವಾಹನಗಳು ತಾಲ್ಲೂಕು ಮೈದಾನದಲ್ಲಿ ಹಾಗೂ ಮಹಿಳಾ ಸಮಾಜ ರಸ್ತೆಯ ಎಡಬದಿಯಲ್ಲಿ ನಿಲುಗಡೆ ಮಾಡಬೇಕು.ಮೈಸೂರು ಬೆಂಗಳೂರು ಕಡೆ ಯಿಂದ ಮಡಿಕೇರಿಗೆ ಹೋಗುವ ವಾಹನಗಳು ಗೋಣಿಕೊಪ್ಪ ಸಿದ್ದಾಪುರ ಮಾರ್ಗವಾಗಿ ಮಡಿಕೇರಿ ಹೋಗುವುದು.ಎಂದು ಜಿಲ್ಲಾ ದಂಡಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ ಅವರು ಆದೇಶ ದಲ್ಲಿ ತಿಳಿಸಿದ್ದಾರೆ.

ವಾಹನ ಸಂಚಾರ ನಿಷೇಧ
ಸೆಪ್ಟೆಂಬರ್‌ 12 ರಂದು ಸಂಜೆ 5 ಗಂಟೆಯಿಂದ ಸೆಪ್ಟೆಂಬರ್‌ 13 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ನಗರದ ತೆಲುಗರ ಬೀದಿ, ದೊಡ್ಡಟ್ಟಿ ವೃತ್ತ, ಅಪ್ಪಯ್ಯ ಸ್ವಾಮಿ ರಸ್ತೆ, ದಖನಿ ಮೊಹಲ್ಲಾ ರಸ್ತೆ, ಅರಸು ನಗರ ರಸ್ತೆ, ಎಫ್.ಎಂ.ಸಿ. ರಸ್ತೆ, ಗಡಿಯಾರ ಕಂಬ, ಮಲಬಾರ್‌ ರಸ್ತೆ, ಗೌರಿಕೆರೆ ರಸ್ತೆ, ಮೀನುಪೇಟೆ ರಸ್ತೆಯ ವಿರಾಜಪೇಟೆ ತಾಲೂಕು ತಹಶೀಲ್ದಾರ್‌ರವರ ಕಚೇರಿವರೆಗೆ ಹಾಗೂ ದೊಡ್ಡಟ್ಟಿ ವೃತ್ತದಿಂದ ಪಂಜರುಪೇಟೆ ಸವೊದಯ ಕಾಲೇಜಿನವರೆಗೆ ಹಾಗೂ ಮಗ್ಗುಲ ಜಂಕ್ಷನ್‌ನಿಂದ ದಖನಿ ಮೊಹಲ್ಲಾ ಜಂಕ್ಷನ್‌ವರೆಗೆ ಯಾವುದೇ ವಾಹನಗಳನ್ನು ನಿಲ್ಲಿಸುವುದನ್ನು ನಿಷೇಧಿಸಿದೆ.

ಮೇಲಿನ ಸಂಚಾರ ನಿಯಮಗಳಿಗೆ ಏನಾದರೂ ವ್ಯತ್ಯಾಸ ಅಥವಾ ಮಾರ್ಪಾಡು ಇದ್ದರೆ ಆಯಾಯ ಸ್ಥಳದಲ್ಲಿ ಇರುವ ಪೊಲೀಸರು ನೀಡುವ ನಿರ್ದೇಶನದಂತೆ ನಡೆದುಕೊಳ್ಳಲು ಕೋರಿಕೆ. ಇದರೊಂದಿಗೆ ಸನ್ನಿವೇಶಕ್ಕೆ ತಕ್ಕಂತೆ ಅವಶ್ಯಕತೆ ಇದ್ದರೆ, ಸಣ್ಣ ಪುಟ್ಟ ಮಾರ್ಪಾಡುಗಳನ್ನು ಮಾಡುವ ನಿಬಂಧನೆಗೊಳಪಟ್ಟಿರುತ್ತದೆ.

ವಾಹನ ಸಂಚಾರ ನಿಯಮವು ಸೆಪ್ಟೆಂಬರ್‌ 12 ರ ಸಂಜೆ 5 ಗಂಟೆಯಿಂದ ಸೆಪ್ಟೆಂಬರ್‌ 13 ರ ಬೆಳಗ್ಗೆ 10 ಗಂಟೆಯವರೆಗೆ ಜಾರಿಯಲ್ಲಿದ್ದು, ಆನಂತರ ಎಂದಿನಂತೆ ವಾಹನ ಸಂಚಾರ ವ್ಯವಸ್ಥೆ ಇರುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next