Advertisement

ರಸ್ತೆ ಗುಂಡಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದ ಟ್ರಾಫಿಕ್‌ ಪೊಲೀಸ್‌

12:55 AM Nov 03, 2019 | Team Udayavani |

ಮಂಗಳೂರು: ನಗರದ ಬಂಟ್ಸ್‌ ಹಾಸ್ಟೆಲ್‌ ಸರ್ಕಲ್‌ ಸಮೀಪ ರಸ್ತೆ ಬದಿಯ ಗುಂಡಿಯೊಂದನ್ನು ಶುಕ್ರವಾರ ಟ್ರಾಫಿಕ್‌ ಪೂರ್ವ ಠಾಣೆ (ಕದ್ರಿ)ಯ ಸಿಬಂದಿ ಪುಟ್ಟರಾಮ ಅವರು ತಾನೇ ಕಲ್ಲು, ಮಣ್ಣು ಹಾಕಿ ಮುಚ್ಚುವ ಮೂಲಕ ಜನಪರ ಕಾಳಜಿ ಮೆರೆದಿದ್ದಾರೆ.

Advertisement

ಈ ಗುಂಡಿಯಲ್ಲಿ ದ್ವಿಚಕ್ರ ವಾಹನ ಮತ್ತು ರಿಕ್ಷಾ ಚಾಲಕರು ಭಾರೀ ಪ್ರಯಾಸ ಪಡುತ್ತಿದ್ದರು. ದ್ವಿಚಕ್ರ ಸವಾರರು ಅಪಘಾತಕ್ಕೂ ಈಡಾಗುತ್ತಿದ್ದರು. ಈ ದುರವಸ್ಥೆಯ ಬಗ್ಗೆ ಟ್ರಾಫಿಕ್‌ ಪೊಲೀಸ್‌ ಸಿಬಂದಿ ಪುಟ್ಟರಾಮ ವಿಡಿಯೋ ಮಾಡಿ ಮನಪಾ ಗಮನಕ್ಕೆ ತಂದಿದ್ದರು. ಆದರೆ ಅಧಿಕಾರಿಗಳು ಈ ದೂರಿಗೆ ಸ್ಪಂದಿಸಿರಲಿಲ್ಲ. ಬಳಿಕ ಪುಟ್ಟರಾಮ ಅವರು ತಾನೇ ಗುಂಡಿ ಮುಚ್ಚಲು ನಿರ್ಧರಿಸಿದರು.

ಅವರ ಸಾಮಾಜಿಕ ಕಾಳಜಿಗೆ ನಗರ ಪೊಲೀಸ್‌ ಆಯುಕ್ತ ಡಾ| ಹರ್ಷ ಪಿ.ಎಸ್‌. ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಹಾಗೂ ಸೋಮವಾರ ಬೆಳಗ್ಗೆ 11.30ಕ್ಕೆ ಕಚೇರಿಗೆ ಕರೆದು ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next