Advertisement

ತರಕಾರಿ ಸಾಗಾಟ ಮಾಡುತ್ತಿದ್ದವರಿಂದ ಲಂಚ: ಸಾರಿಗೆ ಅಧಿಕಾರಿಗಳು ಅಮಾನತು

09:03 AM Apr 04, 2020 | keerthan |

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ ಚೆಕ್ ಪೋಸ್ಟ್ ಅಲ್ಲಿ ಗುರುವಾರ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಇಬ್ಬರು ಬ್ರೇಕ್ ಇನ್ಸ್ ಪೆಕ್ಟರ್ ಗಳನ್ನು ಜಿಲ್ಲಾಧಿಕಾರಿಗಳಾದ ಜಿ ಎನ್ ಶಿವಮೂರ್ತಿ ಅವರು ಅಮಾನತು ಮಾಡಿದ್ದಾರೆ.

Advertisement

ಬ್ರೇಕ್ ಇನ್ಸ್ ಪೆಕ್ಟರ್ ಗಳಾದ ಟಿ. ಕೆ ಜಯಣ್ಣ ಹಾಗೂ ಕರಿಯಪ್ಪ ಅಮಾನತುಗೊಂಡ ಸಾರಿಗೆ ಅಧಿಕಾರಿಗಳು ಸೇರಿದಂತೆ ಇವರೊಂದಿಗೆ ಶಾಮೀಲಾಗಿದ್ದ ಮಾಜಿ ಹೋಮ್ ಗಾರ್ಡ್ ವಿವೇಕ್ ಅವರನ್ನು ಚಾಲಕರಿಂದ ಲಂಚ ಪಡೆದ ಹಿನ್ನೆಲೆ ಅಪರ ಪೊಲೀಸ್ ಅಧೀಕ್ಷಕರಾದ ಸಜಿತ್ ಅವರಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕರಿಯಪ್ಪ ಅವರಿಂದ ರೂ. 1250/-, ಜಯಣ್ಣ ಅವರಿಂದ ರೂ 1100/- ಹಾಗೂ ವಿವೇಕ್ ಅವರಿಂದ ರೂ 800/- ಹಾಗೂ ಚೆಕ್ ಪೋಸ್ಟ್ ಕಚೇರಿಯಲ್ಲಿ ರೂ. 12350/- ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next