Advertisement

ಮಂಗಳೂರು: ಅಕ್ರಮ ಚಿನ್ನ ಸಾಗಾಟ: ಓರ್ವ ಆರೋಪಿಯ ಬಂಧನ

07:43 PM Mar 19, 2021 | Team Udayavani |

ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಣಿಕೆಯನ್ನು ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ.

Advertisement

ಬಂಧಿತ ವ್ಯಕ್ತಿಯನ್ನು ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಉಲ್ಲಾಸ್ ನಗರದ ವಿನೇಶ್ ರಾಜು ಅಡ್ವಾಣಿ ಎಂದು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಕೋವಿಡ್ ಪ್ರಕರಣ ಹೆಚ್ಚಳ: ಲಾಕ್ ಡೌನ್ ಒಂದು ಆಯ್ಕೆಯಾಗಿದೆ: ಉದ್ಧವ್ ಠಾಕ್ರೆ

ಈತ ದಬೈನಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಚಿನ್ನವನ್ನು ಪುಡಿ ರೂಪದಲ್ಲಿ ತನ್ನ ಗುದನಾಳದಲ್ಲಿರಿಕೊಂಡು ಅಕ್ರಮವಾಗಿ ಸಾಗಾಣಿಕೆ ಮಾಡಲು ಯತ್ನಿಸಿದ್ದ. ಈ ಸಮಯದಲ್ಲಿ ವ್ಯಕ್ತಿಯನ್ನು ತಪಾಸಣೆಗೆ ಒಳಪಡಿಸಿರುವ ಅಧಿಕಾರಿಗಳಿಗೆ ಸುಮಾರು 13,16,238/ ರೂ ಮೌಲ್ಯದ 284.900 ಗ್ರಾಂ ಚಿನ್ನ ಪತ್ತೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next