Advertisement

Tragedy: ಗೋವಾದ ಹೊಟೇಲ್‌ನಲ್ಲಿ ತಂಗಿದ್ದ ಯಲ್ಲಾಪುರದ ವ್ಯಕ್ತಿ ಮೃತ್ಯು!

04:53 PM Sep 26, 2024 | Team Udayavani |

ಪಣಜಿ (ಮಡಗಾಂವ್‌): ಗೋವಾದ ಮಡಗಾಂವ್‌ನಲ್ಲಿರುವ ಹೋಟೆಲ್‍ವೊಂದರಲ್ಲಿ ತಂಗಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವೃಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

Advertisement

ಮೃತ ವ್ಯಕ್ತಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡಿಗ ಮಾಲದ ಮನೆಯ ಸುಬ್ರಾಯ ಭಟ್ (53 ವರ್ಷ) ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿ ಲಭ್ಯವಾಗಿರುವ ಮಾಹಿತಿಯ ಅನುಸಾರ ಗೋವಾದ ಮಡಗಾಂವ್‌ನ ಹೋಟೆಲ್‍ವೊಂದರಲ್ಲಿ ಯಲ್ಲಾಪುರದ ಸುಬ್ರಾಯ ಭಟ್ ವಾಸ್ತವ್ಯ  ಹೂಡಿದ್ದರು. ಆದರೆ ಮರುದಿನ ಬೆಳಗಾಗಿದ್ದರೂ ಕೊಠಡಿಯಿಂದ ಹೊರಬಾರದ್ದರಿಂದ ಅನುಮಾನಗೊಂಡು ಹೋಟೆಲ್ ಸಿಬ್ಬಂದಿ ಎಷ್ಟೇ ಬಾಗಿಲು ಬಡಿದರೂ ಬಾಗಿಲು ತೆರೆಯದ್ದರಿಂದ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೋಣೆಯ ಬಾಗಿಲು ತೆರೆದು ನೋಡಿದಾಗ ಸುಬ್ರಾಯ ಭಟ್ ಮಂಚದ ಮೇಲೆ ಮಲಗಿರುವ ಸ್ಥಿತಿಯಲ್ಲಿದ್ದ ಅವರ ಕೂಡಲೇ ಮಡಗಾಂವ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಇವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಇವರ ಸಾವಿಗೆ ನಿಖರವಾದ ಕಾರಣ ಇನ್ನು ತಿಳಿದು ಬರಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next