Advertisement

ಸಿಎಂ ಕುದುರೆ ವ್ಯಾಪಾರಕ್ಕೆ ನಿಂತಿರುವುದು ದುರಂತ 

12:45 AM Jan 17, 2019 | Team Udayavani |

ಬೆಂಗಳೂರು: ಸರ್ಕಾರವನ್ನು ಉಳಿಸಿಕೊಳ್ಳಲು ಬಿಜೆಪಿ ಶಾಸಕರನ್ನು ಕುದುರೆ ವ್ಯಾಪಾರ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳುವ ಮೂಲಕ ತಮ್ಮ ಸರ್ಕಾರ ಅಪಾಯದಲ್ಲಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಡಾ.ವಾಮನಾಚಾರ್ಯ ಹೇಳಿದರು.

Advertisement

ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವತ: ಮುಖ್ಯಮಂತ್ರಿಯೊಬ್ಬರು ಕುದುರೆ ವ್ಯಾಪಾರಕ್ಕೆ ನಿಂತಿರುವುದು ದುರಂತ. ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾತು ಕೇಳಿದ ಬಿಜೆಪಿ ವರಿಷ್ಠರು, ಕರ್ನಾಟಕ ಸರ್ಕಾರದ ಅಸ್ಥಿರ ವಾತಾವರಣದಿಂದ ನಮ್ಮ ಶಾಸಕರನ್ನು ರಕ್ಷಿಸಲು ಗುರುಗ್ರಾಮಕ್ಕೆ ಕರೆದೊಯ್ದಿದ್ದಾರೆ.

ಕಾಂಗ್ರೆಸ್‌, ಜೆಡಿಎಸ್‌ನವರು ತಮ್ಮ ಕಾರ್ಯಕರ್ತರಿಗೆ ಬಂಡಾಯ ಏಳಲು ತಿಳಿಸಿ ನಮ್ಮ ಶಾಸಕರಿರುವ ಸ್ಥಳದಲ್ಲಿ ಗಲಾಟೆ ನಡೆಸಲು ಪ್ರಚೋದನೆ ನೀಡುತ್ತಿದ್ದಾರೆ. ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವುದು ಸಹ ಜನರ ದಾರಿ ತಪ್ಪಿಸುವ ತಂತ್ರವಾಗಿದೆ ಎಂದು ತಿಳಿಸಿದರು.

ಮುಂಬೈನಲ್ಲಿ ಶಾಸಕರಾದ ಉಮೇಶ್‌ ಜಾಧವ್‌ ಹಾಗೂ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ್‌ ಭೇಟಿಯಾದ ಭಾವಚಿತ್ರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್‌ ಶಾಸಕರೇ ಅಪೇಕ್ಷೆ ಪಟ್ಟಿದ್ದರೆ ಹೊರತು ಕಾಂಗ್ರೆಸ್‌ನ ಅತೃಪ್ತ ಶಾಸಕರನ್ನು ಸಂಪರ್ಕಿಸಲು ಬಿಜೆಪಿಯಿಂದ ಯಾವುದೇ ಪ್ರಯತ್ನ ನಡೆದಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next