Advertisement

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

11:51 PM Apr 29, 2024 | Team Udayavani |

ವಿಜಯಪುರ : ಲಚ್ಯಾಣ ಗ್ರಾಮದ ರಥೋತ್ಸವ ದುರಂತದಲ್ಲಿ ತೀವ್ರ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಇದರೊಂದಿಗೆ ರಥೋತ್ಸವ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೇರಿದೆ.

Advertisement

ಭಾನುವಾರ ಜರುಗಿದ ಲಚ್ಯಾಣ ಶಂಕರಲಿಗ ಮಹಾರಾಜರ ರಥೋತ್ಸವದ ಸಂದರ್ಭದಲ್ಲಿ ತೀವ್ರ ಗಾಯಗೊಂಡಿದ್ದ ಸುರೇಶ ಕಟಕಧೋಂಡ ಎಂಬ 36 ವರ್ಷದ ಯುವಕ ಮೃತಪಟ್ಟಿದ್ದಾನೆ.

ರಥೋತ್ಸವದ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗಿ ರಥದ ಗಾಲಿಗೆ ಸಿಲುಕಿ ಅಭಿಷೇಕ ಮುಜಗೊಂಡ (17) ಸೋಬು ಶಿಂಧೆ (51) ಎಂಬ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.

ತೀವ್ರ ಗಾಯಗೊಂಡಿದ್ದ ಸುರೇಶ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಸೋಮವಾರ ಸಂಜೆ ಮೃತಪಟ್ಟಿದ್ದಾನೆ. ಇದರೊಂದಿಗೆ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next